ಸಂಗ್ರಹ ಚಿತ್ರ 
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣ: ಗುಪ್ತಾಂಗದಲ್ಲಿ 8 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆ!; ಮಹಿಳೆ ಬಂಧನ

ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.

ಬೆಂಗಳೂರು: ಗುಪ್ತಾಂಗದಲ್ಲಿ ಸುಮಾರು 8 ಕೋಟಿ ಮೌಲ್ಯದ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ವಿದೇಶಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 8.3 ಕೋಟಿ ರೂ.ಗಳ ಮೌಲ್ಯದ 1.3 ಕೆಜಿ ಮಾದಕವಸ್ತು (ಕೊಕೇನ್) ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಗ್ವಾಟೆಮಾಲಾದ ಓರ್ವ ಮಹಿಳಾ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಬಂಧಿಸಿದ್ದಾರೆ.

ಶುಕ್ರವಾರ ರಾತ್ರಿ ಇಲ್ಲಿ ಬಿಡುಗಡೆ ಮಾಡಿದ ಮಾಹಿತಿಯಂತೆ ಮಂಗಳವಾರ ರಾತ್ರಿ ಮಹಿಳೆ ಗ್ವಾಟೆಮಾಲನ್‌ನಿಂದ ಇಥಿಯೋಪಿಯನ್ ಏರ್‌ಲೈನ್ಸ್ ವಿಮಾನದ ಮೂಲಕ ಆಗಮಿಸಿದ್ದು, 1.3 ಕೆಜಿ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದಾಳೆ. ನಿಷೇಧಿತ ಮಾದಕ ವಸ್ತುವನ್ನು 150 ಮಾತ್ರೆಗಳಲ್ಲಿ(ಕ್ಯಾಪ್ಸೂಲ್ಸ್) ತುಂಬಿಸಿ ದೇಹದಲ್ಲಿ ಇಟ್ಟಿದ್ದ ಟ್ಯೂಬ್‌ ನೊಳಗೆ ಮಾತ್ರೆಗಳನ್ನು ನುಂಗಿ ಕಳ್ಳಸಾಗಣೆ ಮಾಡಲು ಯತ್ನಿಸಿದ್ದಾಳೆ. ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಾಣಿಕೆಯ ಮಹಿಳೆಯಿಂದ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿರುವುದು ಇದೇ ಮೊದಲು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ ಸಂದರ್ಭ ಗುಪ್ತಾಂಗದಲ್ಲಿ 150ಕ್ಕೂ ಹೆಚ್ಚು ಸಣ್ಣಸಣ್ಣ ಟ್ಯೂಬ್‌ ಮಾತ್ರೆಗಳ ರೀತಿಯಲ್ಲಿ ಶೇಖರಿಸಿಟ್ಟುಕೊಂಡಿದ್ದಳು. ಪ್ಲಾಸ್ಟಿಕ್‌ನಂತಹ ವಸ್ತುವಿನಿಂದ ಕವರ್‌ ಮಾಡಿದ ಕೊಕೇನ್‌ ಕ್ಯಾಪ್ಸೂಲ್‌ಗಳು ಒಟ್ಟು 1.385 ಗ್ರಾಂ ತೂಕ ಹೊಂದಿರುವುದಾಗಿ ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದಿಸ್‌ ಅಬಾಬಾದಿಂದ ವಿಮಾನ ಏರುವ ಮುಂಚೆಯೇ ಅಂದರೆ ಎರಡು ದಿನಗಳ ಮೊದಲೇ ತನ್ನ ಗುಪ್ತಾಂಗದಲ್ಲಿ ಕೊಕೇನ್‌ ಇರಿಸಿಕೊಂಡಿದ್ದಳು ಎನ್ನಲಾಗಿದೆ. ಎನ್‌ಡಿಪಿಎಸ್‌ ಕಾಯ್ದೆ ಅಡಿ ವಿದೇಶಿ ಮಹಿಳೆಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ: RSS ಕಾರ್ಯಕ್ರಮಕ್ಕೆ ಹೋಗಲ್ಲ- CJI ಗವಾಯಿ ತಾಯಿ

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

HAL ಗೇ ಠಕ್ಕರ್, ಟಾಟಾ-Airbus ನಿಂದ ಕರ್ನಾಟಕದಲ್ಲಿ H125 ಹೆಲಿಕಾಪ್ಟರ್ ನಿರ್ಮಾಣ!

RSS @100: ಪ್ರಚಾರಕರಾಗಿ ಸಂಘ ಸೇರಿದ ಕೇರಳದ ಮಾಜಿ ಪೊಲೀಸ್ ಮುಖ್ಯಸ್ಥ Jacob Thomas

SCROLL FOR NEXT