ರಮೇಶ್ ಕುಮಾರ್ 
ರಾಜ್ಯ

ಬ್ರಿಟಿಷರನ್ನು ಒದ್ದೋಡಿಸಲು ಒಟ್ಟಾದಂತೆ, ಈಗ ಮೋದಿಯಂತಹವರನ್ನು ಒದ್ದೋಡಿಸಲು ಮುಸ್ಲಿಮರು ಒಟ್ಟಾಗಬೇಕಿದೆ

ಬ್ರಿಟಿಷರನ್ನು ಭಾರತದಿಂದ ಒದ್ದೋಡಿಸಲು ಮುಸ್ಲಿಮರು ಬೀದಿಗಿಳಿದಿದ್ದರು. ಈಗ ನಮ್ಮ ದೇಶದಲ್ಲಿ ಮೋದಿಯಂತಹವರನ್ನು ಒದ್ದೋಡಿಸಲು ಮುಸ್ಲಿಮರು ಬೀದಿಗಿಳಿಯಬೇಕಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. 

ಚಾಮರಾಜನಗರ: ಬ್ರಿಟಿಷರನ್ನು ಭಾರತದಿಂದ ಒದ್ದೋಡಿಸಲು ಮುಸ್ಲಿಮರು ಬೀದಿಗಿಳಿದಿದ್ದರು. ಈಗ ನಮ್ಮ ದೇಶದಲ್ಲಿ ಮೋದಿಯಂತಹವರನ್ನು ಒದ್ದೋಡಿಸಲು ಮುಸ್ಲಿಮರು ಬೀದಿಗಿಳಿಯಬೇಕಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. 

ಚಾಮರಾಜನಗರದಲ್ಲಿ ನಡೆದ ಸಿಎಎ, ಎನ್ ಪಿಆರ್, ಎನ್ಆರ್ ಸಿ ವಿರೋಧಿಸಿ ಸಂವಿಧಾನ ಸಂರಕ್ಷಣಾ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶಕ್ಕೆ ಯಾವುದೇ ಗಂಡಾಂತರ ಇಲ್ಲದಿರುವಾಗ ಮೋದಿ ಪೌರತ್ವದಂತಹ ಕಾಯ್ದೆ ತಂದಿದ್ದಾರೆ, ಇಂಥ ಸರ್ಕಾರದ ವಿರುದ್ಧ ಸಮರ ಸಾರಬೇಕಾಗಿದೆ ಎಂದು ರಮೇಶ್ ಕುಮಾರ್ ಕರೆ ನೀಡಿದ್ದಾರೆ. 

ತ್ರಿವಳಿ ತಲಾಕ್, 370, ನೋಟ್ ಬ್ಯಾನ್ ಕಾಯಿದೆ ತಂದರೂ ಮುಸ್ಲಿಮರು ಪ್ರತಿಭಟಿಸಲಿಲ್ಲ. ಈಗ ಸಿಎಎ ಹಾಗೂ ಎನ್‌ಆರ್‌ಸಿ ಜಾರಿಗೆ ಮುಸ್ಲಿಮರು ಪ್ರತಿಭಟನೆ ನಡೆಸಬೇಕಾಯ್ತು. ಪ್ರಧಾನಿ ಮೋದಿ ಬ್ರಿಟಿಷರ ವಿರುದ್ದ ಹೋರಾಡಿದವರನ್ನ ಬೀದಿಯಲ್ಲಿ ನಿಲ್ಲಿಸಿದ್ದಾರೆ. ಮೋದಿಯಂತಹವರನ್ನು ಒದ್ದೋಡಿಸಲು ಮುಸ್ಲಿಮರು ಒಟ್ಟಾಗಬೇಕಿದೆ ಎಂದು ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT