ರವಿ ಪೂಜಾರಿ 
ರಾಜ್ಯ

14 ದಿನಗಳ ನ್ಯಾಯಾಂಗ ಬಂಧನಕ್ಕೆ ರವಿ ಪೂಜಾರಿ

ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಬೆಂಗಳೂರು: ಇತ್ತೀಚಿಗೆ ಸೆನೆಗಲ್ ನಲ್ಲಿ ಬಂಧಿಸಲಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ತನಿಖೆ ನಡೆಸಲು ಬಾಡಿ ವಾರಂಟ್‌ ಆಧಾರದ ಮೇಲೆ  ಆತನನ್ನು ಮತ್ತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ.

ಆಗ್ನೇಯ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ನೇತೃತ್ವದಲ್ಲಿ ರಚಿಸಲಾದ ತಂಡವು ಪೂಜಾರಿಯನ್ನು ವಿಚಾರಣೆ ನಡೆಸುತ್ತಿದೆ.

ಪೂಜಾರಿ ಸಹಚರರು ಶಾಬ್ನಾಮ್ ಡೆವಲಪರ್ಸ್‌ನ ನೌಕರರಾದ  ಶೈಲಾಜಾ ಮತ್ತು ಚಾಲಕ ರವಿ ಅವರ ಮೇಲೆ ಗುಂಡು ಹಾರಿಸಿ ಕೊಂದಿದ್ದರು.

ಪೂಜಾರಿ ತನಿಖೆಗೆ ಸಹಕರಿಸುತ್ತಿದ್ದಾನೆ. ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಎರಡು ಪ್ರಕರಣಗಳ ತನಿಖೆ ನಂತರ ಪೂಜಾರಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ನಂತರ ಮತ್ತೆ 2001ರಲ್ಲಿ ವೈಯಾಲಿಕಾವಲ್ ನಲ್ಲಿ ನಡೆದಿದ್ದ ಸುಬ್ಬರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯಾದ್ಯಂತ 97 ಕೇಸ್ ಗಳಲ್ಲಿ ಪೂಜಾರಿ ಭಾಗಿಯಾಗಿದ್ದು, 47 ಕೇಸ್ ಗಳು ಬೆಂಗಳೂರು ಒಂದರಲ್ಲಿಯೇ ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!