ರಾಜ್ಯ

ಬೀದರ್: ನಿಶ್ಚಿತಾರ್ಥ ಆಗಿಲ್ಲ ಅಂತ ಮಹಿಳಾ ದಿನಾಚರಣೆಯಂದೆ ಬಾವಿಗೆ ಬಿದ್ದು ಶಿಕ್ಷಕಿ ಆತ್ಮಹತ್ಯೆ!

Vishwanath S

ಬೀದರ್: ಹೆಣ್ಮಕ್ಕಳೆ ಸ್ಟ್ರಾಂಗು ಗುರು ಅಂತಾ ಹೇಳುತ್ತಾರೆ. ಆದರೆ ಮಕ್ಕಳಿಗೆ ಬುದ್ಧಿವಾದ ಹೇಳಿ ತಿದ್ದಬೇಕಿದ್ದ ಶಿಕ್ಷಕಿಯೊಬ್ಬರು ನಿಶ್ಚಿತಾರ್ಥ ಆಗಲಿಲ್ಲ ಅಂತ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. 

24 ವರ್ಷದ ಪೂಜಾ ಎಂಬುವರು ಭಾಲ್ಕಿ ತಾಲೂಕಿನ ಭಾಲ್ಕೇಶ್ವರ ದೇವಸ್ಥಾನದ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಡೆಟ್ ನೋಟ್ ನಲ್ಲಿ ಪೂಜಾ ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟಿದ್ದಾರೆ.

ಪೂಜಾ ಭಾಲ್ಕಿಯ ಖಾಸಗಿ ಚನ್ನಬಸವ ಪದವಿ ಕಾಲೇಜಿನಲ್ಲಿ ರಾಸಾಯನಿಕ ಶಾಸ್ತ್ರದ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಇನ್ನು ವರನ ಕಡೆಯವರು ಹಲವು ಬಾರಿ ನೋಡಿ ಹೋಗಿದ್ದರು ನಿಶ್ಚಿತಾರ್ಥ ಮಾಡಿಕೊಂಡಿರಲಿಲ್ಲ. ಹೀಗಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. 

ಭಾಲ್ಕಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

SCROLL FOR NEXT