ಸಂಗ್ರಹ ಚಿತ್ರ 
ರಾಜ್ಯ

ಶ್ರೀಶ್ರೀ ರವಿಶಂಕರ್ ಆಶ್ರಮದ ಸಾಕಾನೆಗೆ ಮಾವುತ ಬಲಿ

ಸಾಕು ಆನೆಯೊಂದು ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ನಗರ ಹೊರವಲಯದಲ್ಲಿರುವ ಶ್ರೀಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ವರದಿಯಾಗಿದೆ. 

ಬೆಂಗಳೂರು: ಸಾಕು ಆನೆಯೊಂದು ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ನಗರ ಹೊರವಲಯದಲ್ಲಿರುವ ಶ್ರೀಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ವರದಿಯಾಗಿದೆ. 

ಕೇರಳ ಮೂಲದ 34 ವರ್ಷದ ರಾಜೇಶ್ ಮೃತ ಮಾವುತ. ಮೇವು ಹಾಕಲು ತೆರಳಿದ್ದಾಗ ಮದವೇರಿದ ಆನೆ ಏಕಾಏಕೀ ಕಾಲಿನಿಂದ ತುಳಿದು ಮಾವುತನನ್ನು ಸಾಯಿಸಿದೆ ಎನ್ನಲಾಗಿದೆ.

ರವಿಶಂಕರ್ ಗುರೂಜಿ ಅವರು ಆಶ್ರಮದಲ್ಲಿ ಎರಡು ಆನೆಗಳನ್ನು ಸಾಕಿದ್ದು, ಸುಮಾರು 8 ವರ್ಷಗಳಿಂದ ರಾಜೇಶ್, ಆನೆಗಳ ಪಾಲನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT