ಸಂಗ್ರಹ ಚಿತ್ರ 
ರಾಜ್ಯ

ಶ್ರೀಶ್ರೀ ರವಿಶಂಕರ್ ಆಶ್ರಮದ ಸಾಕಾನೆಗೆ ಮಾವುತ ಬಲಿ

ಸಾಕು ಆನೆಯೊಂದು ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ನಗರ ಹೊರವಲಯದಲ್ಲಿರುವ ಶ್ರೀಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ವರದಿಯಾಗಿದೆ. 

ಬೆಂಗಳೂರು: ಸಾಕು ಆನೆಯೊಂದು ಮಾವುತನನ್ನು ಕಾಲಿನಿಂದ ತುಳಿದು ಸಾಯಿಸಿರುವ ಘಟನೆ ನಗರ ಹೊರವಲಯದಲ್ಲಿರುವ ಶ್ರೀಶ್ರೀ ರವಿಶಂಕರ್ ಗುರೂಜಿ ಆಶ್ರಮದಲ್ಲಿ ವರದಿಯಾಗಿದೆ. 

ಕೇರಳ ಮೂಲದ 34 ವರ್ಷದ ರಾಜೇಶ್ ಮೃತ ಮಾವುತ. ಮೇವು ಹಾಕಲು ತೆರಳಿದ್ದಾಗ ಮದವೇರಿದ ಆನೆ ಏಕಾಏಕೀ ಕಾಲಿನಿಂದ ತುಳಿದು ಮಾವುತನನ್ನು ಸಾಯಿಸಿದೆ ಎನ್ನಲಾಗಿದೆ.

ರವಿಶಂಕರ್ ಗುರೂಜಿ ಅವರು ಆಶ್ರಮದಲ್ಲಿ ಎರಡು ಆನೆಗಳನ್ನು ಸಾಕಿದ್ದು, ಸುಮಾರು 8 ವರ್ಷಗಳಿಂದ ರಾಜೇಶ್, ಆನೆಗಳ ಪಾಲನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT