ರಾಜ್ಯ

ಸಾಂಕ್ರಾಮಿಕ ರೋಗದ ಭೀತಿ: ಹೋಳಿ ಹಬ್ಬದ ಸಮೂಹ ಆಚರಣೆಗಳಿಂದ ದೂರವಿರಲು ಮುಖ್ಯಮಂತ್ರಿ ಸಲಹೆ

Manjula VN

ಬೆಂಗಳೂರು: ಬಣ್ಣಗಳ ಹಬ್ಬ ಹೋಳಿ ಹಬ್ಬಕ್ಕೆ ಈ ಬಾರಿ ಕೊರೋನಾ ವೈರಸ್'ನ ಕರಿಛಾಯೆ ಬಿದ್ದಿದ್ದು, ಈ ನಡುವಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು, ನಾಡಿನ ಜನತೆಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಜನತೆಗೆ ಶುಭಾಶಯ ಕೋರಿರುವ ಅವರು, ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣಗಳಿಂದ ದೂರವಿರೋಣ ಎಂದು ಜನತೆಗೆ ಮನವಿ ಮಾಡಿಕೊಂಡಿದ್ದಾರೆ. 

ನಾಡಿನ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣದ ಓಕುಳಿಯ ರಂಗು ನಮ್ಮೆಲ್ಲರ ಬಾಳನ್ನು ಅರ್ಥಪೂರ್ಣವಾಗಿ ತುಂಬಲಿ. ಬಣ್ಣ ಮೈಮೇಲಿರುವುದಕ್ಕಿಂತ ಮುಖ್ಯವಾಗಿ ಬದುಕಿನಲ್ಲಿರಲಿ. ಸುರಕ್ಷಿತ ಆಚರಣೆಗೆ ಮಹತ್ವ ಕೊಡೋಣ. ಸಾಂಕ್ರಾಮಿಕ ರೋಗದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಸಮೂಹ ಆಚರಣೆಗಳಿಂದ ದೂರವಿರೋಣ ಎಂದು ಹೇಳಿದ್ದಾರೆ. 

SCROLL FOR NEXT