ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ 
ರಾಜ್ಯ

ಕೊನೆಗೂ ಪ್ರತ್ಯಕ್ಷರಾದ ಆರೋಗ್ಯ ಸಚಿವ: ಕೆಐಎಎಲ್'ಗೆ ದಿಢೀರ್ ಭೇಟಿ, ಪರಿಶೀಲನೆ

ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ಬೆಂಗಳೂರು: ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 

ರಾಜ್ಯದಲ್ಲಿ ಕೊರೋನಾ ಭೀತಿ ಕಾಣಿಸಿಕೊಂಡಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ವೈರಸ್ ಕುರಿತು ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರ ಉಸ್ತುವಾರಿ ನೋಡಿಕೊಳ್ಳಬೇಕಿದ್ದ ಆರೋಗ್ಯ ಸಚಿವರ ಶ್ರೀರಾಮುಲು ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. 

ಈ ನಡುವೆ ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಕಾರಣದಿಂದ ಸಚಿವ ಶ್ರೀರಾಮುಲು ಅವರು ನಾಪತ್ತೆಯಾಗಿದ್ದಾರೆಂದು ವ್ಯಾಪಕ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದವು.

ಇದೀಗ ದಿಢೀರ್ ಪ್ರತ್ಯಕ್ಷವಾಗಿರುವ ಸಚಿವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ತಪಾಸಣೆ ನಡೆಸುವ ಸ್ಥಲಕ್ಕೆ ಭೇಟಿ ನೀಡಿದ ಸಚಿವರು, ಯಾವ ರೀತಿಯ ವ್ಯವಸ್ತೆಯನ್ನು ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT