ಮಾತೇ ಮಾಣಿಕೇಶ್ವರಿ 
ರಾಜ್ಯ

ಮಾತೆ ಮಾಣಿಕೇಶ್ವರಿ ಅಂತ್ಯ ಸಂಸ್ಕಾರ: ಕಣ್ಣೀರ ವಿದಾಯ ಹೇಳಿದ ಲಕ್ಷಾಂತರ ಭಕ್ತರು

ತಮ್ಮ ನಿರಾಹಾರ, ಶಿವಧ್ಯಾನ, ಅಹಿಂಸಾ ಬೋಧನೆಯಿಂದಲೇ ಜನಮಾನಸದಲ್ಲಿ ನೆಲೆಯೂರಿರುವ ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು, ಗಿರಿ ಯೋಗಿನಿ ಸೇಡಂ ತಾಲೂಕಿನ ಯಾನಾಗುಂದಿ ಬೆಟ್ಟದ ಭಕ್ತರ ಮಾಣಿಕ್ಯ ಮಾತಾ ಮಾಣಿಕೇಶ್ವರಿ ಅಮ್ಮನವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದ ಸೂರ್ಯನಂದಿ ಕ್ಷೇತ್ರದಲ್ಲಿ ಸೋಮವಾರ ಲಕ್ಷಾಂತರ ಭಕ್ತರ ಉಪಸ್ಥಿತಿಯಲ್ಲಿ ನೆರವೇರಿತು. 

ಕಲಬುರಗಿ: ತಮ್ಮ ನಿರಾಹಾರ, ಶಿವಧ್ಯಾನ, ಅಹಿಂಸಾ ಬೋಧನೆಯಿಂದಲೇ ಜನಮಾನಸದಲ್ಲಿ ನೆಲೆಯೂರಿರುವ ಕಲ್ಯಾಣ ಕರ್ನಾಟಕದ ನಡೆದಾಡುವ ದೇವರು, ಗಿರಿ ಯೋಗಿನಿ ಸೇಡಂ ತಾಲೂಕಿನ ಯಾನಾಗುಂದಿ ಬೆಟ್ಟದ ಭಕ್ತರ ಮಾಣಿಕ್ಯ ಮಾತಾ ಮಾಣಿಕೇಶ್ವರಿ ಅಮ್ಮನವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದ ಸೂರ್ಯನಂದಿ ಕ್ಷೇತ್ರದಲ್ಲಿ ಸೋಮವಾರ ಲಕ್ಷಾಂತರ ಭಕ್ತರ ಉಪಸ್ಥಿತಿಯಲ್ಲಿ ನೆರವೇರಿತು. 
    
ಮಧ್ಯಾಹ್ನ 2.30ರವರಗೆ ಸಾರ್ವಜನಿಕರಿಗೆ ಪಾರ್ಥೀವ ಶರೀರದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದರ ಜೊತೆಗೆ ವೀರ ಶೈವ ಸಂಪ್ರದಾಯದಂತೆ ಶ್ರೀಶೈಲ, ಯಾನಾಗುಂದಿಯ ಪುರೋಹಿತರ ತಂಡದಿಂದ ವೇದಘೋಷ, ಪೂಜೆ ನಡದಾದ ಮೇಲೆ ಅಂತಿಮ ವಿಧಿಯ ಪ್ರಕಾರ ಅಮ್ಮನವರಿಗೆ ನಾಗಸಿಂಹಾಸನದಲ್ಲಿ ವಿಶೇಷ ಪೂಜೆ ನಡೆಸಲಾಗಿತ್ತು. ಶಿಲೆಯಲ್ಲಿ ನಿರ್ಮಿಸಲಾಗಿದ್ದ ಲಿಂಗದಲ್ಲಿ ವಿಭೂತಿ, ಏಕಬಿಲ್ವಪತ್ರ ದಳಗಳು, ತುಳಸಿ, ಗಂದದ ಕಟ್ಟಿಗೆ ಇಡಲಾಯ್ತು. ನಂತರ ನಾಗಸಿಂಹಾಸನದ ಕೆಳಗಡೆಯಿರುವ ಲಿಂಗಾಕಾರದ ಪುಟ್ಟ ಗುಹೆಯಲ್ಲಿ ಅಮ್ಮನವರ ಪಾರ್ಥೀವ ಶರೀರವಿಟ್ಟು ಪೂಜೆ ಸಲ್ಲಿಸಲಾಯಿತು. ಸರಳ ಪೂಜೆ, ಆರತಿ ಬಲಿಕ ಮಾತಾಜಿ ಪಾರ್ಥೀವ ಶರೀರವನ್ನು ಸೂರ್ಯನಂದಿ ಕ್ಷೇತ್ರದಲ್ಲಿ ಮಹಾಮಂದಿರದ ಒಳಗೆ ಇದ್ದ ಕಲ್ಲಿನ ಲಿಂಗದೊಳಗೆ ಇಡಲಾಯಿತು. 

ಬೀದರಿನ ಮಾಣಿಕ್ಯ ಗಿರಿ ಸಂಸ್ಥಾನದ ಅಪ್ಪಸಾಹೇಬ್ ಮಹಾರಾಜರ ಸ್ವಾಮಿಯ ಆಶ್ರಮದಲ ಮಹಾಸ್ವಾಮಿ ವಿಶ್ವನಾಥ ಶಾಸ್ತ್ರೀ ಮತ್ತು ಶ್ರೀಶೈಲಂನ ನಂದಿಶ್ವರ ಸ್ವಾಮಿ ಹಾಗೂ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಸ್ವಾಮಿ ಮೂಲಕ ವೇದಮಂತ್ರಗಳನ್ನು ಪಠಿಸುತ್ತ ರುದ್ರಾಭಿಷೇಕ, ಮಹಾ ಪೂಜೆ ನೆರವೇರಿಸಿದರು. ನಿರಂತರ ಮೂರು ಗಂಟೆಗಳ ಕಾಲ ವಿಧಿ ವಿಧಾನಗಳು ನೇರವೇರಿದ ಬಳಿಕ 3.15ಕ್ಕೆ ಯೋಗಿನಿ ಮಾತಾ ಮಾಣಿಕೇಶ್ವರಿ ಲಿಂಗದಲ್ಲಿ ಲೀನವಾದರು. 

ಇದಕ್ಕೂ ಮೊದಲು ಮಧ್ಯಾಹ್ನ 12.58ಕ್ಕೆ ಸರ್ಕಾರದಿಂದ ಕೆಲ ಗೌರವಗಳನ್ನು ಮಾತೆಗೆ ಅರ್ಪಿಸಲಾಯ್ತು. ಯಾದಗಿರಿ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ್ ಸರ್ಕಾರದ ಪ್ರತಿನಿಧಿಯಾಗಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಲ್ಯಾಣ ಕರ್ನಾಟಕದ ಅನೇಕ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT