ಚಾಮರಾಜನಗರ: ಅಂಬ್ಯುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯ, ಅರಣ್ಯ ಇಲಾಖೆ ಜೀಪಿನಲ್ಲಿ ಜನಿಸಿದ್ದ ಶಿಶು ಆಸ್ಪತ್ರೆಯಲ್ಲಿ ಸಾವು 
ರಾಜ್ಯ

ಚಾಮರಾಜನಗರ: ಅಂಬ್ಯುಲೆನ್ಸ್ ಸಿಬ್ಬಂದಿಯ ನಿರ್ಲಕ್ಷ್ಯ, ಅರಣ್ಯ ಇಲಾಖೆ ಜೀಪಿನಲ್ಲಿ ಜನಿಸಿದ್ದ ಶಿಶು ಆಸ್ಪತ್ರೆಯಲ್ಲಿ ಸಾವು

ಆಸ್ಪತ್ರೆಯ ಆ್ಯಂಬುಲೆನ್ಸ್​ ಸಿಬ್ಬಂದಿ ಸರಿಯಾಗಿ ಸ್ಪಂದಿಸದೆ ಚೆಲ್ಲಾಟವಾಡಿದ ಪರಿಣಾಮ ಆಗತಾನೆ ಜನಿಸಿದ್ದ ಶಿಶು ಅಸುನೀಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಚಾಮರಾಜನಗರ: ಆಸ್ಪತ್ರೆಯ ಆ್ಯಂಬುಲೆನ್ಸ್​ ಸಿಬ್ಬಂದಿ ಸರಿಯಾಗಿ ಸ್ಪಂದಿಸದೆ ಚೆಲ್ಲಾಟವಾಡಿದ ಪರಿಣಾಮ ಆಗತಾನೆ ಜನಿಸಿದ್ದ ಶಿಶು ಅಸುನೀಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆ್ಯಂಬುಲೆನ್ಸ್​ ಸಿಬ್ಬಂದಿಗೆ ಎಷ್ಟು ಬಾರಿ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ಅರಣ್ಯ ಇಲಾಖೆಯ ಜೀಪಿನಲ್ಲೇ ಸೋಲಿಗ ಜನಾಂಗದ ಗರ್ಭಿಣಿ ಮಾದಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಕರೆ ತರಲಾಯಿತು. 

ಆದರೆ, ಆಸ್ಪತ್ರೆ ಆವರಣದಲ್ಲೇ ಆಕೆಗೆ ಹೆರಿಗೆಯಾಗಿತ್ತು. ಕೂಡಲೇ ಶಿಶು ಮತ್ತು ತಾಯಿಗೆ ತುರ್ತ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು.ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ. 

ಆ್ಯಂಬುಲೆನ್ಸ್​ ಸಿಬ್ಬಂದಿ ಚೆಲ್ಲಾಟದಿಂದ ಈಗ ನವಜಾತ ಶಿಶು ಜೀವ ಕಳೆದುಕೊಂಡಿದೆ ಎಂದು ತಾಯಿ ಕಣ್ಣೀರು ಹಾಕುತ್ತಿದ್ದಾಳೆ. 

ಬಿಳಿಗಿರಿರಂಗನ ಬೆಟ್ಟದ ಭೂತಾಣಿ ಪೋಡಿನ ಮಾದಮ್ಮ ಎಂಬಾಕೆ ಜೀಪಿನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದರು.ಅರಣ್ಯ ಇಲಾಖೆ ಜೀಪಿನಲ್ಲಿ ಜನಿಸಿದ್ದ ಶಿಶು ಆಸ್ಪತ್ರೆಯಲ್ಲಿ ಸಾವುಮಾದಮ್ಮನಿಗೆ ಇದು ಎರಡನೇ ಹೆರಿಗೆಯಾಗಿದೆ. 

ಆ್ಯಂಬುಲೆನ್ಸ್​ಗೆ ಹಲವು ಬಾರಿ ಕರೆ ಮಾಡಿದರೂ ಸ್ಪಂದಿಸಲಿಲ್ಲ. ಕೊನೆಗೆ ಆ್ಯಂಬುಲೆನ್ಸ್ ಇಲ್ಲ, ಮೈಸೂರಿಗೆ ತೆರಳಿರುವುದಾಗಿ ಉತ್ತರಿಸಿದರು ಎಂದು ಮಾದಮ್ಮನ ಸಹೋದರಿ ಮಲ್ಲಮ್ಮ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT