ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್ 
ರಾಜ್ಯ

ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್

ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ. 

ಕರಗ ಆಚರಣೆ ಸಮಿತಿಯವರು ಹಾಗೂ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಅವರು, ಉತ್ಸವದ ವೇಳೆ ಕೊರೋನಾ ಸೋಂಕು ಹಾಗೂ ಕಾಲರಾ ಹಬ್ಬದಂತೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವರ್ಷವೂ ಎಂದಿನಂತೆ ಕರಗ ನಡೆಯಲಿದೆ. ಕರಗ ಮಹೋತ್ಸವ ಒಂದು ಸಂಪ್ರದಾಯಿಕ, ಪಾರಂಪಾರಿಕವಾದ ಆಚರಣೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾಲಿಕೆ ವತಿಯಿಂದ ಇದಕ್ಕೆ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಎಂದರು. 

ತಾವು ಗುರುವಾರ ಬೆಳಗ್ಗೆ 7ಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಚ್ಛತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಿದ್ದೇವೆ ಎಂದರು. 

ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಮಾತನಾಡಿ, ಕೊರೋನಾ ವೈರಾಣು ಹರಡದಂತೆ ತಡೆಯುವ ಜವಾಬ್ದಾರಿಯೂ ನಮ್ಮ ಮೇಲಿದೆ. ಇದಕ್ಕಾಗಿ ಕರಗ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾಪಾಡಲು ನಿಗಾ ವಹಿಸಲಾಗುವುದು. ಕರಗಕ್ಕೆ ಇನ್ನೂ ಒಂದು ತಿಂಗಳ ಸಮಯವಿದೆ. ಅಂದಿನ ಪರಿಸ್ಥಿತಿ ನೋಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ವಿಧಾನಪರಿಷತ್ ಸದಸ್ಯ ಪಿ.ಆರ್ ರಮೇಶ್ ಮಾತನಾಡಿ, ಏ.8ರಂದು ಕರಗ ನಡೆಯಲಿದೆ. ಸಿದ್ಧತೆಗೆ ಸಾಕಷ್ಟು ಸಮಯವಿದೆ. ಈ ಹಿಂದೆ ಲೇಗ್ ನಂತಹ ಮಹಾಮಾರಿ ಬಂದ ಸಮಯದಲ್ಲೂ ಕರಗ ನಿಲ್ಲಿಸಿಲ್ಲ. ಸ್ವಾತಂತ್ರ್ಯಪೂರ್ವದ ನಿಷೇಧಾಜ್ಞೆ ನಡುವೆಯೂ ಕರಗ ಆಚರಿಸಲಾಗಿದೆ. ದ್ರೌಪದಿ ದೇವಿಯ ಶಕ್ತಿಯಿಂದ ಆಚರಣೆಗೆ ಯಾವುದೇ ಸಮಸ್ಯೆ ಆಗೋದಿಲ್ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT