ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್ 
ರಾಜ್ಯ

ಕರಗ ಉತ್ಸವಕ್ಕೆ ಕೊರೋನಾ ಅಡ್ಡಿಯಾಗದು, ಸಂಪ್ರದಾಯದಂತೆ ಆಚರಣೆ; ಮೇಯರ್ ಗೌತಮ್ ಕುಮಾರ್

ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಕಾಣಿಸಿಕೊಂಡಿರುವ ಕೊರೋನಾ ವೈರಾಣು ಸೋಂಕು ಭೀತಿಯ ನಡುವೆಯೂ ಈ ವರ್ಷದ ಐತಿಹಾಸಿಕ ಕರಗ ಉತ್ಸವ ವಿಜೃಂಭಣೆಯಿಂದ ನಡೆಯಲಿದೆ ಎಂದು ಮೇಯರ್ ಗೌತಮ್ ಕುಮಾರ್ ಜೈನ್ ಹೇಳಿದ್ದಾರೆ. 

ಕರಗ ಆಚರಣೆ ಸಮಿತಿಯವರು ಹಾಗೂ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಸಿದ ಅವರು, ಉತ್ಸವದ ವೇಳೆ ಕೊರೋನಾ ಸೋಂಕು ಹಾಗೂ ಕಾಲರಾ ಹಬ್ಬದಂತೆ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವರ್ಷವೂ ಎಂದಿನಂತೆ ಕರಗ ನಡೆಯಲಿದೆ. ಕರಗ ಮಹೋತ್ಸವ ಒಂದು ಸಂಪ್ರದಾಯಿಕ, ಪಾರಂಪಾರಿಕವಾದ ಆಚರಣೆ. ಅದನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಪಾಲಿಕೆ ವತಿಯಿಂದ ಇದಕ್ಕೆ ಎಲ್ಲಾ ಸಿದ್ದತೆಗಳನ್ನ ಮಾಡಿಕೊಳ್ಳಲಾಗುತ್ತಿದೆ ಎಂದರು. 

ತಾವು ಗುರುವಾರ ಬೆಳಗ್ಗೆ 7ಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ, ಸ್ವಚ್ಛತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಿದ್ದೇವೆ ಎಂದರು. 

ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಮಾತನಾಡಿ, ಕೊರೋನಾ ವೈರಾಣು ಹರಡದಂತೆ ತಡೆಯುವ ಜವಾಬ್ದಾರಿಯೂ ನಮ್ಮ ಮೇಲಿದೆ. ಇದಕ್ಕಾಗಿ ಕರಗ ಸಾಗುವ ಮಾರ್ಗದಲ್ಲಿ ಶುಚಿತ್ವ ಕಾಪಾಡಲು ನಿಗಾ ವಹಿಸಲಾಗುವುದು. ಕರಗಕ್ಕೆ ಇನ್ನೂ ಒಂದು ತಿಂಗಳ ಸಮಯವಿದೆ. ಅಂದಿನ ಪರಿಸ್ಥಿತಿ ನೋಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

ವಿಧಾನಪರಿಷತ್ ಸದಸ್ಯ ಪಿ.ಆರ್ ರಮೇಶ್ ಮಾತನಾಡಿ, ಏ.8ರಂದು ಕರಗ ನಡೆಯಲಿದೆ. ಸಿದ್ಧತೆಗೆ ಸಾಕಷ್ಟು ಸಮಯವಿದೆ. ಈ ಹಿಂದೆ ಲೇಗ್ ನಂತಹ ಮಹಾಮಾರಿ ಬಂದ ಸಮಯದಲ್ಲೂ ಕರಗ ನಿಲ್ಲಿಸಿಲ್ಲ. ಸ್ವಾತಂತ್ರ್ಯಪೂರ್ವದ ನಿಷೇಧಾಜ್ಞೆ ನಡುವೆಯೂ ಕರಗ ಆಚರಿಸಲಾಗಿದೆ. ದ್ರೌಪದಿ ದೇವಿಯ ಶಕ್ತಿಯಿಂದ ಆಚರಣೆಗೆ ಯಾವುದೇ ಸಮಸ್ಯೆ ಆಗೋದಿಲ್ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್