ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಡಿಕೆಶಿ, ಸಿದ್ದರಾಮಯ್ಯ 
ರಾಜ್ಯ

ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಡಿಕೆಶಿ, ಸಿದ್ದರಾಮಯ್ಯ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಘಟನೆ ವಿಧಾನಸಭೆ ಮೊಗಸಾಲೆಯಲ್ಲಿ ನಡೆಯಿತು.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಘಟನೆ ವಿಧಾನಸಭೆ ಮೊಗಸಾಲೆಯಲ್ಲಿ ನಡೆಯಿತು.

ಕೆಪಿಸಿಸಿ ಅಧ್ಯಕ್ಷ, ಪ್ರತಿಪಕ್ಷ ನಾಯಕರ ಮುಂದುವರಿಕೆ ಆದೇಶ ಏಐಸಿಸಿಯಿಂದ ಹೊರಬೀಳುತ್ತಿದ್ದಂತೆ ವಿಧಾನಸೌಧದ ಮೊಗಸಾಲೆಯಲ್ಲೇ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೂವು ನೀಡಿ ಶುಭ ಕೋರಿದರು.

ಇದಕ್ಕೆ ಪ್ರತಿಯಾಗಿ ನಾನು ಈಗಾಗಲೇ ಪ್ರತಿಪಕ್ಷ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕನಾಗಿದ್ದೇನೆ. ಈ ಹುದ್ದೆಯನ್ನು ಮುಂದುವರೆಸಿದ್ದಾರೆ ಅಷ್ಟೆ, ನಾನೇ ನಿನಗೆ ಶುಭಾಶಯ ಹೇಳಬೇಕಯ್ಯ ಎನ್ನುತ್ತಾ ಅಭಿನಂದಿಸಿದರು. ನಂತರ ಪರಸ್ಪರ ಶುಭ ಕೋರಿ ಇಬ್ಬರೂ ಸದನದ ಒಳಗೆ ಪ್ರವೇಶಿಸಿದರು.

ಸದನ ಮುಂದೂಡಿಕೆಯಾದ ನಂತರ ಮೊಗಸಾಲೆಯಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ, ರಮೇಶ್ ಕುಮಾರ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ, ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಎಂದು ಹಿರಿಯ ನಾಯಕರು ಡಿ.ಕೆ ಶಿವಕುಮಾರ್ ಗೆ ಶುಭ ಕೋರಿ ಕಿವಿ ಮಾತು ಹೇಳಿದರು. 

ನಂತರ ಹಿರಿಯ ನಾಯಕರನ್ನೊಳಗೊಂಡಂತೆ ಮೊಗಸಾಲೆಯಲ್ಲೇ ಸಣ್ಣ ಸಭೆ ನಡೆಸಲಾಯಿತು. ಅಲ್ಲಿಗೆ ಬರುತ್ತಿದ್ದ ನಾಯಕರು, ಶಾಸಕರು, ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದರು. ವಿಧಾನ ಪರಿಷತ್ ಪ್ರತಿ ಪಕ್ಷದ ನೂತನ ವಿಪ್ ನಾರಾಯಣಸ್ವಾಮಿ ಕೂಡ ಆಗಮಿಸಿ ಶಿವಕುಮಾರ್ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರು, ಸಿದ್ದರಾಮಯ್ಯ ಅವರಿಗೂ ಹೂಗುಚ್ಛ ನೀಡಿ ಶುಭ ಕೋರಿದರು.

ಗಮನ ಸೆಳದ ರೇಣುಕಾಚಾರ್ಯ: ಇನ್ನು ವಿರೋಧ ಪಕ್ಷದ ಮೊಗಸಾಲೆಯಲ್ಲಿ ಕಾಣಿಸಿಕೊಂಡ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಡಿ.ಕೆ ಶಿವಕುಮಾರ್ ಅವರಿಗೆ ಶುಭ ಕೋರಿದರು. ಹೊನ್ನಾಳಿಯ ಹಿರೇಮಲ್ಮಠಕ್ಕೆ ಬಂದಾಗಲೇ ನಿಮಗೆ ಶುಭ ಸುದ್ದಿ ಬರಲಿದೆ ಎಂದು ಹೇಳಿದ್ದೆ ಅದು ನಿಜವಾಗಿದೆ ಇಂದು ನಿಮಗೆ ಶುಭ ಸುದ್ದಿ ಬಂದಿದೆ ಎನ್ನುತ್ತಾ ಶುಭ ಕೋರಿದರು.

ಎಂಬಿ ಪಾಟೀಲ್ ಮೌನ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಆಗಿದ್ದ ಮಾಜಿ ಸಚಿವ ಎಂಬಿ ಪಾಟೀಲ್ ಮೊಗಸಾಲೆಯಲ್ಲಿ ಮೌನವಾಗಿ ಕುಳಿತಿದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ್ದು ಬಿಟ್ಟರೆ ಅಲ್ಲಿ ಕಾಂಗ್ರೆಸ್ ಮುಖಂಡರು ನಡೆಸುತ್ತಿದ್ದ ಮಾತುಕತೆ ಯಿಂದ ಅವರು ದೂರ ಉಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!