ಮಧ್ಯಪ್ರೇದಶ ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆ ನೀಡಲಾಗುತ್ತದೆ: ಡಿಐಜಿ 
ರಾಜ್ಯ

ಮಧ್ಯಪ್ರದೇಶ ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆ ನೀಡಲಾಗುತ್ತದೆ: ಡಿಐಜಿ

ಬೆಂಗಳೂರಿನ ರೆಸಾರ್ಟ್ ನಲ್ಲಿ ತಂಗಿರುವ ಮಧ್ಯಪ್ರದೇಶದ 19 ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆಯನ್ನು ನೀಡಲಾಗುತ್ತದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. 

ಬೆಂಗಳೂರು: ಬೆಂಗಳೂರಿನ ರೆಸಾರ್ಟ್ ನಲ್ಲಿ ತಂಗಿರುವ ಮಧ್ಯಪ್ರದೇಶದ 19 ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆಯನ್ನು ನೀಡಲಾಗುತ್ತದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. 

ಭದ್ರತೆ ಬಗ್ಗೆ ಪ್ರಶ್ನೆಯೇ ಇಲ್ಲ. ಮಧ್ಯಪ್ರದೇಶದ ಎಲ್ಲಾ ಶಾಸಕರು ನಗರದಲ್ಲಿ ಸುರಕ್ಷಿತರಾಗಿದ್ದಾರೆ. ಯಾರೊಬ್ಬರಿಗೂ ಯಾವುದೇ ರೀತಿಯ ಬೆದರಿಕೆಗಳಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಶಾಸಕರು ತಂಗಿದ್ದ ರೆಸಾರ್ಟ್ ಬಳಿ ಕೆಲ ಸಣ್ಣಪುಟ್ಟ ಪ್ರತಿಭಟನೆಗಲು ನಡೆದಿದ್ದವು. ಕೂಡಲೇ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳು ಪ್ರತಿಭಟನಾಕಾರರು ಸ್ಥಳದಿಂದ ತೆರಳುವಂತೆ ಮಾಡಿದ್ದರು. ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗಿದೆ ಎಂದು ತಿಳಿಸಿದ್ದಾರೆ. 

ಪ್ರತೀಯೊಬ್ಬ ಶಾಸಕರಿಗೂ ಪೊಲೀಸ್ ರಕ್ಷಣೆ ನೀಡಲಾಗುತ್ತದೆ. ಈ ವರೆಗೂ ಶಾಸಕರ ಜೀವಕ್ಕೆ ಯಾವುದೇ ಬೆದರಿಕೆಗಳಿಲ್ಲ. ಮುಖ್ಯ ಕೆಲಸದ ಮೇರೆಗೆ ಸ್ವಯಂಪ್ರೇರಿತರಾಗಿ ಬೆಂಗಳೂರಿಗೆ ಬಂದಿರುವುದಾಗಿ ಶಾಸಕರು ಹೇಳಿದ್ದಾರೆ. ಶಾಸಕರು ಸುರಕ್ಷಿತವಾಗಿ ತಮ್ಮ ಕಾರ್ಯಗಳನ್ನು ಮಾಡುವುದಕ್ಕೆ ಹಾಗೂ ಬೆಂಗಳೂರಿನಲ್ಲಿ ಸುರಕ್ಷಿತರಾಗಿರುವಂತೆ ಮಾಡಲು ಭದ್ರತೆಯನ್ನು ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ನಡುವೆ ಶಾಸಕರಿರುವ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಧಿಕಾರಿಗಳು, ರೆಸಾರ್ಟ್ ಬಳಿ ಭದ್ರತೆಯನ್ನು ಹೆಚ್ಚಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT