ಸಾಂದರ್ಭಿಕ ಚಿತ್ರ 
ರಾಜ್ಯ

ದುಬೈನಿಂದ ಆಗಮಿಸಿದ್ದ ವ್ಯಕ್ತಿ ಸೇರಿ 6 ಜನರಲ್ಲಿ ಕೊರೋನಾ ಸೋಂಕು ಇಲ್ಲ; ಮಂಗಳೂರು ಡಿಸಿ 

ದುಬೈನಿಂದ ಆಗಮಿಸಿದ 35 ವರ್ಷದ ಪ್ರಯಾಣಿಕನಲ್ಲಿ ಯಾವುದೇ ಕೊರೋನಾ ವೈರಸ್ ಇಲ್ಲವೇ ಎಚ್ 1ಎನ್ 1 ಸೋಂಕು ಕಂಡುಬಂದಿಲ್ಲ ಎಂದು ಮಂಗಳೂರು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. 

ಮಂಗಳೂರು: ದುಬೈನಿಂದ ಆಗಮಿಸಿದ 35 ವರ್ಷದ ಪ್ರಯಾಣಿಕನಲ್ಲಿ ಯಾವುದೇ ಕೊರೋನಾ ವೈರಸ್ ಇಲ್ಲವೇ ಎಚ್ 1ಎನ್ 1 ಸೋಂಕು ಕಂಡುಬಂದಿಲ್ಲ ಎಂದು ಮಂಗಳೂರು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. 

ಪ್ರಯಾಣಿಕನನ್ನು ಬಂಟ್ವಾಳ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ದುಬೈನಿಂದ ಮಾ.8ರಂದು ಆಗಮಿಸಿದ್ದ ವ್ಯಕ್ತಿಯಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ತಕ್ಷಣ ಅವರನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಅಲ್ಲಿಂದ ಪರಾರಿಯಾಗಿದ್ದರು. ನಂತರ ಅವರನ್ನು ಪತ್ತೆಹಚ್ಚಿ ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ರಕ್ತ ಹಾಗೂ ಇತರ ಮಾದರಿಗಳನ್ನು ಹಾಸನ ವೈದ್ಯಕೀಯ ಸಂಸ್ಥೆಯ ವೈರಾಣು ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿತ್ತು. 

ಏತನ್ಮಧ್ಯೆ, ಆರು ರೋಗಿಗಳಲ್ಲಿ ಕೋವಿಡ್-19 ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಇಲ್ಲಿಯರೆಗೆ ಜಿಲ್ಲೆಯಲ್ಲಿ 49 ಜನರು ತಮ್ಮ 28 ದಿನಗಳ ತಪಾಸಣೆಯನ್ನು ಪೂರ್ಣಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT