ಸಾಂದರ್ಭಿಕ ಚಿತ್ರ 
ರಾಜ್ಯ

ದುಬೈನಿಂದ ಆಗಮಿಸಿದ್ದ ವ್ಯಕ್ತಿ ಸೇರಿ 6 ಜನರಲ್ಲಿ ಕೊರೋನಾ ಸೋಂಕು ಇಲ್ಲ; ಮಂಗಳೂರು ಡಿಸಿ 

ದುಬೈನಿಂದ ಆಗಮಿಸಿದ 35 ವರ್ಷದ ಪ್ರಯಾಣಿಕನಲ್ಲಿ ಯಾವುದೇ ಕೊರೋನಾ ವೈರಸ್ ಇಲ್ಲವೇ ಎಚ್ 1ಎನ್ 1 ಸೋಂಕು ಕಂಡುಬಂದಿಲ್ಲ ಎಂದು ಮಂಗಳೂರು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. 

ಮಂಗಳೂರು: ದುಬೈನಿಂದ ಆಗಮಿಸಿದ 35 ವರ್ಷದ ಪ್ರಯಾಣಿಕನಲ್ಲಿ ಯಾವುದೇ ಕೊರೋನಾ ವೈರಸ್ ಇಲ್ಲವೇ ಎಚ್ 1ಎನ್ 1 ಸೋಂಕು ಕಂಡುಬಂದಿಲ್ಲ ಎಂದು ಮಂಗಳೂರು ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. 

ಪ್ರಯಾಣಿಕನನ್ನು ಬಂಟ್ವಾಳ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು, ಮನೆಯಲ್ಲಿ 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ದುಬೈನಿಂದ ಮಾ.8ರಂದು ಆಗಮಿಸಿದ್ದ ವ್ಯಕ್ತಿಯಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ತಕ್ಷಣ ಅವರನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಅಲ್ಲಿಂದ ಪರಾರಿಯಾಗಿದ್ದರು. ನಂತರ ಅವರನ್ನು ಪತ್ತೆಹಚ್ಚಿ ಬಂಟ್ವಾಳ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ರಕ್ತ ಹಾಗೂ ಇತರ ಮಾದರಿಗಳನ್ನು ಹಾಸನ ವೈದ್ಯಕೀಯ ಸಂಸ್ಥೆಯ ವೈರಾಣು ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿತ್ತು. 

ಏತನ್ಮಧ್ಯೆ, ಆರು ರೋಗಿಗಳಲ್ಲಿ ಕೋವಿಡ್-19 ಸೋಂಕು ಇಲ್ಲ ಎಂಬುದು ದೃಢಪಟ್ಟಿದೆ. ಇಲ್ಲಿಯರೆಗೆ ಜಿಲ್ಲೆಯಲ್ಲಿ 49 ಜನರು ತಮ್ಮ 28 ದಿನಗಳ ತಪಾಸಣೆಯನ್ನು ಪೂರ್ಣಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT