ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರರು 
ರಾಜ್ಯ

ರಾಜ್ಯದಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿರುವ ಸಂಸ್ಥೆಗಳಿಗೆ ಎಲ್ಲ ರೀತಿಯ ನೆರವು - ಬಿ.ಎಸ್. ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಗುರುವಾರ ಏರೋಸ್ಪೇಸ್ ಸಂಸ್ಥೆ ಲಾಕ್ಹೀಡ್ ಮಾರ್ಟಿನ್ ಮತ್ತು ಐಕೆಇಎ ಇಂಡಿಯಾದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಹೂಡಿಕೆ ಯೋಜನೆಗಳು ಮತ್ತು ಅವುಗಳ ಪ್ರಸ್ತುತ ಯೋಜನೆಗಳ ಬಗ್ಗೆ ಚರ್ಚಿಸಿದರು

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಗುರುವಾರ ಏರೋಸ್ಪೇಸ್ ಸಂಸ್ಥೆ ಲಾಕ್ಹೀಡ್ ಮಾರ್ಟಿನ್ ಮತ್ತು ಐಕೆಇಎ ಇಂಡಿಯಾದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಹೂಡಿಕೆ ಯೋಜನೆಗಳು ಮತ್ತು ಅವುಗಳ ಪ್ರಸ್ತುತ ಯೋಜನೆಗಳ ಬಗ್ಗೆ ಚರ್ಚಿಸಿದರು

ರಾಜ್ಯದಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿರುವ ಸಂಸ್ಥೆಗಳಿಗೆ ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಅವರು ಇದೇ ವೇಳೆ ಭರವಸೆ ನೀಡಿದರು.

ವಿಶ್ವ ಆರ್ಥಿಕ ಒಕ್ಕೂಟ ಶೃಂಗಸಭೆಗಾಗಿ ದಾವೋಸ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಲಾಕ್ಹೀಡ್ ಮಾರ್ಟಿನ್ ಸೇರಿದಂತೆ ಹಲವು ಉನ್ನತ ಅಧಿಕಾರಿಗಳನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೇಟಿ ಮಾಡಿದ್ದರು. 

ರಾಜ್ಯದಲ್ಲಿ ಹೂಡಿಕೆ ಮಾಡಲು ಉತ್ಸುಕರಾಗಿರುವ ಲಾಕ್ಹೀಡ್ ಮಾರ್ಟಿನ್  ಸಂಸ್ಥೆಗೆ ಎಲ್ಲ ರೀತಿಯ ನೆರವು ಒದಗಿಸುವಂತೆ ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ  ಸಭೆಯಲ್ಲಿ ನಿರ್ದೇಶಿಸಿದರು. 

ಇದು ಸೌಜನ್ಯದ ಭೇಟಿ, ಹೈದರಾಬಾದ್‌ನಲ್ಲಿರುವಂತೆ  ಬೆಂಗಳೂರಿನ ನಾಗಸಂದ್ರ ಪ್ರದೇಶದಲ್ಲಿ ಕಂಪನಿಯ ಮಳಿಗೆ ತಲೆ ಎತ್ತಲಿದೆ.  ಬೆಂಗಳೂರಿನ ವಿವಿಧ ಭಾಗಗಳಲ್ಲಿ “ಗ್ರಾಹಕ ಸಭೆ ಕೇಂದ್ರಗಳು” ಅಥವಾ ವಿವಿಧ ಸ್ವರೂಪಗಳ ಮಳಿಗೆಗಳನ್ನು ತೆರೆಯಲು ಕಂಪನಿಯು ಯೋಜಿಸಿದೆ ಎಂದು ಐಕೆಇಎ ಇಂಡಿಯಾ ಅಧಿಕಾರಿಗಳು ತಿಳಿಸಿದರು. 

ಗುರುವಾರ ನಡೆದ ಸಭೆಯಲ್ಲಿ ಕಂಪನಿಯ ಅಧಿಕಾರಿಗಳು,  ಪ್ರಸ್ತುತ ನಡೆಯುತ್ತಿರುವ ಯೋಜನೆ ಮತ್ತು ಬೆಂಗಳೂರಿನಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆಯುವ ಯೋಜನೆಗಳ ಬಗ್ಗೆ ಸಿಎಂಗೆ ವಿವರಿಸಿದರು. ಕಂಪನಿಯು ಕೆಲವು ವರ್ಷಗಳ ಹಿಂದೆ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT