ಕೋವಿಡ್ -19: ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸೋಂಕು ಮಾದರಿ ಪರೀಕ್ಷೆ ಪ್ರಯೋಗಾಲಯ 
ರಾಜ್ಯ

ಕೋವಿಡ್ -19: ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಸೋಂಕು ಮಾದರಿ ಪರೀಕ್ಷೆ ಪ್ರಯೋಗಾಲಯ

ಕೋವಿಡ್-19 ಸೋಂಕು ಪತ್ತೆ ಹಚ್ಚಲು ನಗರದ ಕೆ.ಆರ್ ಆಸ್ಪತ್ರೆಯ ವೈರಲ್ ರಿಸರ್ಚ್ ಅಂಡ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ( ವಿಆರ್ ಡಿಎಲ್) ಸೋಂಕು ಪರೀಕ್ಷಾ ಪ್ರಯೋಗಾಲಯವನ್ನಾಗಿ ಕೇಂದ್ರ ಸರ್ಕಾರ ಗುರುತಿಸಿದೆ ಎಂದು ಅಧಿಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

ಮೈಸೂರು: ಕೋವಿಡ್-19 ಸೋಂಕು ಪತ್ತೆ ಹಚ್ಚಲು ನಗರದ ಕೆ.ಆರ್ ಆಸ್ಪತ್ರೆಯ ವೈರಲ್ ರಿಸರ್ಚ್ ಅಂಡ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ( ವಿಆರ್ ಡಿಎಲ್) ಸೋಂಕು ಪರೀಕ್ಷಾ ಪ್ರಯೋಗಾಲಯವನ್ನಾಗಿ ಕೇಂದ್ರ ಸರ್ಕಾರ ಗುರುತಿಸಿದೆ ಎಂದು ಅಧಿಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

ಸೋಂಕು ಶಂಕಿತರ ರಕ್ತ, ಗಂಟಲು ದ್ರವ ಮಾದರಿಗಳನ್ನು ವಿಶ್ಲೇಷಣೆಗಾಗಿ ಈ ಪ್ರಯೋಗಾಲಯಕ್ಕೆ ಕಳುಹಿಸದರೆ ಮೂರು ಗಂಟೆಗಳಲ್ಲಿ ಪರೀಕ್ಷೆ ನಡೆಸಿ, ಪುಣೆಯ ವೈರಾಣು ಸಂಸ್ಥೆಗೆ ರವಾನಿಸಲಿದೆ.

ಕೆ.ಆರ್. ಆಸ್ಪತ್ರೆಯ ಸೂಕ್ಷ್ಮ ಜೀವವಿಜ್ಞಾನ ವಿಭಾಗದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ಸ್ಥಾಪಿಸಲಾಗಿರುವ ವೈರಲ್ ರಿಸರ್ಚ್ ಅಂಡ್ ಡಯಾಗ್ನೋಸ್ಟಿಕ್ ಲ್ಯಾಬೊರೇಟರಿ ( ವಿಆರ್ ಡಿಎಲ್) ಕೊರೊನಾ ಸೋಂಕು ಮಾದರಿಗಳ ಪರೀಕ್ಷೆ ನಡೆಸಲುಅನುಮತಿ ಕಲ್ಪಿಸಲಾಗಿದೆ. ಮೈಸೂರಿನ ಈ ಪ್ರಯೋಗಾಲಯ ದೇಶದ 52 ಪ್ಲಸ್ ಪ್ರಯೋಗಾಲಯಗಳಲ್ಲಿ ಒಂದಾಗಿದೆ.

ಪರೀಕ್ಷೆಗಳನ್ನು ನಡೆಸಲು ವಿಆರ್‌ಡಿಎಲ್ ಸಜ್ಜುಗೊಂಡಿದ್ದರೂ, ದೇಶದಲ್ಲಿ ಸೋಂಕು ದೃಢಪಡಿಸುವ ಏಕೈಕ ಅಧಿಕಾರ ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮಾತ್ರ ಹೊಂದಿದೆ. ಕೋವಿಡ್ -19 ರ ಶಂಕಿತ ಮಾದರಿಗಳನ್ನು ಸಂಗ್ರಹಿಸಿ ಸಾಗಿಸುವ ಕಾರ್ಯವನ್ನು ಮಾತ್ರ ವಿಆರ್ ಡಿಎಲ್ ಮಾಡಲಿದೆ. ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಭಾಗವಾಗಿರುವ ವಿಆರ್ ಡಿಎಲ್ ರಾಷ್ಟ್ರೀಯ ವೈರಾಣು ಸಂಸ್ಥೆಯ ಸಲಹೆಯಂತೆ ಕಾರ್ಯನಿರ್ವಹಿಸುತ್ತಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ, ಇಲ್ಲಿ ನಡೆಸಿದ ಪರೀಕ್ಷೆಗಳ ಫಲಿತಾಂಶಗಳನ್ನು ಅದೇ ದಿನ ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ರವಾನಿಸಲಿದ. ಪ್ರಕರಣಗಳನ್ನು ದೃಢಪಡಿಸಿ ಘೋಷಿಸುವ ಏಕೈಕ ಅಧಿಕಾರ ಪುಣೆಯ ಸಂಸ್ಥೆ ಹೊಂದಿದೆ. ಅಲ್ಲದೆ, ಕೊರೊನಾ ಸೋಂಕಿನ ಮಾದರಿಗಳು ನಕಾರಾತ್ಮಕ ಎಂದು ಕಂಡು ಬಂದರೂ ಸಹ ರಾಷ್ಟ್ರೀಯ ವೈರಾಣು ಸಂಸ್ಥೆ ದೃಢೀಕರಿಸಿ ಘೋಷಿಸಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT