ಮಂಗಳೂರು ಹಿಂಸಾಚಾರ 
ರಾಜ್ಯ

ಮಂಗಳೂರು ಗೋಲಿಬಾರ್: 936 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸ್ ಆಯುಕ್ತರು

ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷಾ ಅವರು ಶುಕ್ರವಾರ ಮ್ಯಾಜಿಸ್ಟ್ರೀರಿಯಲ್‌ ತನಿಖೆಗೆ ಹಾಜರಾಗಿ, 936 ಪುಟಗಳ ದಾಖಲೆ ಹಾಗೂ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಮಂಗಳೂರು: ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷಾ ಅವರು ಶುಕ್ರವಾರ ಮ್ಯಾಜಿಸ್ಟ್ರೀರಿಯಲ್‌ ತನಿಖೆಗೆ ಹಾಜರಾಗಿ, 936 ಪುಟಗಳ ದಾಖಲೆ ಹಾಗೂ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಇಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ನೇತೃತ್ವದ ತನಿಖಾ ತಂಡದ ಮುಂದೆ ಹಾಜರಾದ ಹರ್ಷಾ ಅವರು, ಕಳೆದ ವರ್ಷ ಡಿಸೆಂಬರ್ 19ರಂದು ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಮತ್ತು 21 ಪುಟಗಳ ತಮ್ಮ ಹೇಳಿಕೆಯನ್ನು ಸಲ್ಲಿಸಿದರು.

ಮಂಗಳೂರು ಪೊಲೀಸ್ ಆಯುಕ್ತರಿಗೆ ಸಂಬಂಧಿಸಿದ ತನಿಖೆ ಈಗ ಮುಕ್ತಾಯವಾಗಿದೆ ಎಂದು ತನಿಖಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.

ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ 320 ಜನರು ಹಲವು ದಾಖಲೆ ಮತ್ತು ಸಾಕ್ಷ್ಯಗಳನ್ನು ಸಲ್ಲಿಸಿದ್ದಾರೆ ಎಂದು ಜಗದೀಶ್ ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಹಾಗೂ ಗೋಲಿಬಾರ್ ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಹೇಳಿಕೆ ಪಡೆಯುವುದು ಮಾತ್ರ ಬಾಕಿ ಎಂದು ಜಗದೀಶ್ ಅವರು ತಿಳಿಸಿದ್ದಾರೆ.

ಒಟ್ಟು 176 ಪೊಲೀಸರನ್ನು ಸಾಕ್ಷಿಗಳೆಂದು ಪರಿಗಣಿಸಲಾಗಿದ್ದು, ಈ ಇನ್ನು 57 ಮಂದಿಯ ವಿಚಾರಣೆ ಬಾಕಿ ಇದೆ. ಹೀಗಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಲು ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಘಟನೆಯ ಮ್ಯಾಜಿಸ್ಟ್ರೀಯಲ್‌ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅದರಂತೆ ಮಾ.24ಕ್ಕೆ ತನಿಖಾ ಆಯೋಗ ರಚನೆಗೊಂಡು ಮೂರು ತಿಂಗಳು ಆಗುತ್ತದೆ. ಇದುವರೆಗೆ ಮಧ್ಯಂತರ ವರದಿ ಮಾತ್ರ ಸಲ್ಲಿಸಲಾಗಿದೆ. ಮಾ.24ಕ್ಕೆ ಆಯೋಗದ ವರದಿ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಆದರೆ ಇನ್ನು 57 ಪೊಲೀಸರ, ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್‌, ವೈದ್ಯಾಧಿಕಾರಿಗಳ ವಿಚಾರಣೆ ಬಾಕಿ ಇದೆ. ಹಾಗಾಗಿ ಅಂತಿಮ ವರದಿ ಸಲ್ಲಿಕೆಗೆ ತನಿಖಾ ಆಯೋಗದ ಅವಧಿಯನ್ನು ವಿಸ್ತರಿಸುವಂತೆ ತನಿಖಾಧಿಕಾರಿಗಳು ಸರ್ಕಾರವನ್ನು ಕೇಳಿಕೊಳ್ಳುವ ಸಂಭವ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT