ಮಂಗಳೂರು ಹಿಂಸಾಚಾರ 
ರಾಜ್ಯ

ಮಂಗಳೂರು ಗೋಲಿಬಾರ್: 936 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸ್ ಆಯುಕ್ತರು

ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷಾ ಅವರು ಶುಕ್ರವಾರ ಮ್ಯಾಜಿಸ್ಟ್ರೀರಿಯಲ್‌ ತನಿಖೆಗೆ ಹಾಜರಾಗಿ, 936 ಪುಟಗಳ ದಾಖಲೆ ಹಾಗೂ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಮಂಗಳೂರು: ಇಬ್ಬರನ್ನು ಬಲಿ ಪಡೆದ ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ. ಪಿಎಸ್ ಹರ್ಷಾ ಅವರು ಶುಕ್ರವಾರ ಮ್ಯಾಜಿಸ್ಟ್ರೀರಿಯಲ್‌ ತನಿಖೆಗೆ ಹಾಜರಾಗಿ, 936 ಪುಟಗಳ ದಾಖಲೆ ಹಾಗೂ ತಮ್ಮ ಹೇಳಿಕೆ ದಾಖಲಿಸಿದ್ದಾರೆ.

ಇಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ನೇತೃತ್ವದ ತನಿಖಾ ತಂಡದ ಮುಂದೆ ಹಾಜರಾದ ಹರ್ಷಾ ಅವರು, ಕಳೆದ ವರ್ಷ ಡಿಸೆಂಬರ್ 19ರಂದು ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಹಾಗೂ ದಾಖಲೆಗಳನ್ನು ಮತ್ತು 21 ಪುಟಗಳ ತಮ್ಮ ಹೇಳಿಕೆಯನ್ನು ಸಲ್ಲಿಸಿದರು.

ಮಂಗಳೂರು ಪೊಲೀಸ್ ಆಯುಕ್ತರಿಗೆ ಸಂಬಂಧಿಸಿದ ತನಿಖೆ ಈಗ ಮುಕ್ತಾಯವಾಗಿದೆ ಎಂದು ತನಿಖಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.

ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ 320 ಜನರು ಹಲವು ದಾಖಲೆ ಮತ್ತು ಸಾಕ್ಷ್ಯಗಳನ್ನು ಸಲ್ಲಿಸಿದ್ದಾರೆ ಎಂದು ಜಗದೀಶ್ ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರ ಹಾಗೂ ಗೋಲಿಬಾರ್ ಗೆ ಬಲಿಯಾದ ಇಬ್ಬರು ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಹೇಳಿಕೆ ಪಡೆಯುವುದು ಮಾತ್ರ ಬಾಕಿ ಎಂದು ಜಗದೀಶ್ ಅವರು ತಿಳಿಸಿದ್ದಾರೆ.

ಒಟ್ಟು 176 ಪೊಲೀಸರನ್ನು ಸಾಕ್ಷಿಗಳೆಂದು ಪರಿಗಣಿಸಲಾಗಿದ್ದು, ಈ ಇನ್ನು 57 ಮಂದಿಯ ವಿಚಾರಣೆ ಬಾಕಿ ಇದೆ. ಹೀಗಾಗಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಲು ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಮಂಗಳೂರು ಗಲಭೆ ಹಾಗೂ ಗೋಲಿಬಾರ್‌ ಘಟನೆಯ ಮ್ಯಾಜಿಸ್ಟ್ರೀಯಲ್‌ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅದರಂತೆ ಮಾ.24ಕ್ಕೆ ತನಿಖಾ ಆಯೋಗ ರಚನೆಗೊಂಡು ಮೂರು ತಿಂಗಳು ಆಗುತ್ತದೆ. ಇದುವರೆಗೆ ಮಧ್ಯಂತರ ವರದಿ ಮಾತ್ರ ಸಲ್ಲಿಸಲಾಗಿದೆ. ಮಾ.24ಕ್ಕೆ ಆಯೋಗದ ವರದಿ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಆದರೆ ಇನ್ನು 57 ಪೊಲೀಸರ, ಜಿಲ್ಲಾಧಿಕಾರಿ, ಸಹಾಯಕ ಕಮಿಷನರ್‌, ವೈದ್ಯಾಧಿಕಾರಿಗಳ ವಿಚಾರಣೆ ಬಾಕಿ ಇದೆ. ಹಾಗಾಗಿ ಅಂತಿಮ ವರದಿ ಸಲ್ಲಿಕೆಗೆ ತನಿಖಾ ಆಯೋಗದ ಅವಧಿಯನ್ನು ವಿಸ್ತರಿಸುವಂತೆ ತನಿಖಾಧಿಕಾರಿಗಳು ಸರ್ಕಾರವನ್ನು ಕೇಳಿಕೊಳ್ಳುವ ಸಂಭವ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT