ರಾಜ್ಯ

ಪ್ರಚಾರ ಪಡೆಯುವ ಪ್ರಹಸನ ಬೇಡ: ಮಾರಕ ಕೊರೋನಾ ತಡೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

Raghavendra Adiga

ಬೆಂಗಳೂರು: ಮಾರಕ ಕೊರೋನಾ ದೇಶಾದ್ಯಂತ ವ್ಯಾಪಿಸಿದ್ದು ಜನರು ಭಯಭೀತರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಆರು ಮಂದಿಯಲ್ಲಿ ಕೊರೋನಾವೈರಸ್ ದೃಢಪಟ್ಟಿದ್ದು ಕಲಬುರಗಿಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೊರೋನಾ ನಿಯತ್ರಣಕ್ಕಾಗಿ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ ಕೊರೋನಾವನ್ನು ಪ್ರಚಾರಕ್ಕಾಗಿ ಬಳಸಿಕೊಂಡು ಪ್ರಹಸನ ಸೃಷ್ಟಿಸಬೇಡಿ ಎಂದೂ ತಿಳಿಸಿದ್ದಾರೆ.

ಕೊರೋನಾ ಜಾಗೃತಿಯ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ "ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ.ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು." ಎಂದಿದ್ದಾರೆ.

"ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ  ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು.

"ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ. 

"ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

SCROLL FOR NEXT