ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಕೊರೋನಾ ಲಸಿಕೆ ಕಾರ್ಯಕ್ರಮ ನಿಲ್ಲಿಸಿದ ಪೋಲೀಸರು!

ನಗರದ ಈಶ್ವರಮ್ಮ ಸ್ಕೂಲ್ ಆಫ್ ಪಿಜೆ ಎಕ್ಸ್ಟೆನ್ಷನ್ ನಲ್ಲಿ ಮಾರಕ ಕೊರೋನಾವೈರಸ್ ಗಾಗಿ ಲಸಿಕೆ ಕಾರ್ಯಕ್ರಮದ ಹೆಸರಲ್ಲಿ ಸಾರ್ವಜನಿಕರರಿಗೆ ಲಸಿಕೆ ವಿತರಣೆ ನಡೆಸುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು  ತಡೆಹಿಡಿದ್ದಾರೆ.

ದಾವಣಗೆರೆ: ನಗರದ ಈಶ್ವರಮ್ಮ ಸ್ಕೂಲ್ ಆಫ್ ಪಿಜೆ ಎಕ್ಸ್ಟೆನ್ಷನ್ ನಲ್ಲಿ ಮಾರಕ ಕೊರೋನಾವೈರಸ್ ಗಾಗಿ ಲಸಿಕೆ ಕಾರ್ಯಕ್ರಮದ ಹೆಸರಲ್ಲಿ ಸಾರ್ವಜನಿಕರರಿಗೆ ಲಸಿಕೆ ವಿತರಣೆ ನಡೆಸುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು  ತಡೆಹಿಡಿದ್ದಾರೆ.

ಶನಿವಾರ ದಾವಣಗೆರೆ ಪಿಜೆ ಎಕ್ಸ್ಟೆನ್ಷನ್  ರಾಘವೇಂದ್ರ ಸ್ವಾಮಿ ಮಠದ ಬಳಿ ಇರುವ ಶಾಲೆಯಲ್ಲಿ ಕೊರೋನಾವೈರಸ್ ತಡೆಗಾಗಿ ಹೋಮಿಯೋಪತಿ ಹನಿಗಳನ್ನು ಸಾರ್ವಜನಿಕರಿಗೆ ಲಸಿಕೆ  ರೂಪದಲ್ಲಿ ವಿತರಿಸುವ ಕಾರ್ಯಕ್ರಮವಿತ್ತು. ಈ ಕುರಿತು ಮಾಹಿತಿ ಪಡೆದ  ಡಿಎಚ್‌ಒ ಡಾ.ರಾಘವೇಂದ್ರ ಸ್ವಾಮಿ.ತಕ್ಷಣ ಸ್ಥಳಕ್ಕೆ ತೆರಳಿ ಅದನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಆದರೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸುವ ಹೊತ್ತಿಗಾಗಲೇ ಅನೇಕರು ಈ ಹೋಮಿಯೋಪತಿ ಔಷದಿ ಸೇವನೆ ಮಾಡಿದ್ದರು.

'ಈ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ನಿಲ್ಲಿಸುವಲ್ಲಿ ನಾವು ತೊಂದರೆಗಅನುಭವಿಸಿದ್ದೆವು. ಆದರೆ ಅಂತಿಮವಾಗಿ  ವ್ಯಾಕ್ಸಿನೇಷನ್  ಕಾರ್ಯಕ್ರಮ ನಿಲ್ಲಿಸಿದ್ದಾರೆ. ನಾವು ಕಾರ್ಯಕ್ರಮಕ್ಕಾಗಿ ಕೊಠಡಿ ನೀಡಿರುವ ಶಾಲಾ ಮುಖ್ಯೋಪಾದ್ಯಾಯರ ವಿರುದ್ಧ ಕ್ರಮ ಜರುಗಿಸುವುದಾಗಿ ಬೆದರಿಸಿದಾಗ ಅವರು ಸ್ಥಳದಿಂದ ಹೊರನಡೆದರು." ಡಾ.ರಾಘವೇಂದ್ರಸ್ವಾಮಿ ಹೇಳಿದ್ದಾರೆ.

'ಲಸಿಕೆ ಹಾಕಿದ ವ್ಯಕ್ತಿಗಳು ಮತ್ತು ಕಾರ್ಯಕ್ರಮಕ್ಕಾಗಿ ಕಟ್ಟಡವನ್ನು ನೀಡಿದ ದ ಶಾಲಾ ಅಧಿಕಾರಿಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ, ಜನರು ಕೊರೋನಾ ಲಸಿಕೆ ಬಗೆಗೆ ಸುಳ್ಳು ವದಂತಿಗಳನ್ನು ನಂಬಬಾರದು" ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT