ಬಂಧನ 
ರಾಜ್ಯ

ಬೆಂಗಳೂರು: ಕೊರೋನಾಗೆ ಹೆದರದ ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ: 42ಜನರ ಬಂಧನ

ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಸಿಂಚನ ಕ್ಲಬ್ ಮಾಲೀಕ ಶ್ರೀನಿವಾಸ್ ಸೇರಿ 25ಜನರನ್ನು ಬಂಧಿಸಲಾಗಿದ್ದು, 61,200ರೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಅರಸಿಕೆರೆಯಲ್ಲಿರುವ ಕ್ಲಬ್ ನಲ್ಲಿ ಸದಸ್ಯರಲ್ಲದವರು ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು.

ಅಲ್ಲದೇ, ಸಾಂಕ್ರಾಮಿಕ ರೋಗ ತಡೆಗಟ್ಟಲು ಹಿನ್ನೆಲೆಯಲ್ಲಿ ನಗರದ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ಉಲ್ಲಂಘಿಸಿ, ಸಾರ್ವಜನಿಕ ರು ಒಂದೆಡೆ ಸೇರಿ ಜೂಜಾಡಲು ಅವಕಾಶ ಮಾಡಿಕೊಟ್ಟ ಕಾರಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಸ್ಕೈಲೈನ್ ಕ್ಲಬ್ ಮೇಲೂ ಸಿಸಿಬಿ ಪೊಲೀಸರು ದಾಳಿ ನಡೆಸಿ, 16 ಜನರನ್ನು ಬಂಧಿಸಿದ್ದಾರೆ.

ಕ್ಲಬ್ ಸೆಕ್ರೆಟರಿ ಶ್ರೀನಿವಾಸ್ ಸೇರಿ 16 ಜನರನ್ನು ಬಂಧಿಸಲಾಗಿದ್ದು, 2, 11.500 ರೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರದ ಸ್ಕೈಲೆನ್ ಕ್ಲಬ್ ನಲ್ಲಿ ಸದಸ್ಯರಲ್ಲದವರು ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು. ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಬಿ ವಿಶೇಷ ವಿಚಕ್ಷಣ ದಳದ ಸಹಾಯಕ ಪೊಲೀಸ್ ಆಯುಕ್ತ ಡಿಟಿ ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT