ಬಂಧನ 
ರಾಜ್ಯ

ಬೆಂಗಳೂರು: ಕೊರೋನಾಗೆ ಹೆದರದ ಕ್ಲಬ್‍ಗಳ ಮೇಲೆ ಸಿಸಿಬಿ ದಾಳಿ: 42ಜನರ ಬಂಧನ

ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು: ಕೋರಾನಾ ವೈರಸ್ ಭೀತಿಯನ್ನು ಲೆಕ್ಕಿಸದೆ ನಗರದ ಸಿಂಚನ ಹಾಗೂ ಸ್ಕೈಲೈನ್ ಕ್ಲಬ್ ಗಳಲ್ಲಿ ಕಾನೂನು ಬಾಹಿರವಾಗಿ ಜೂಜಾಡುತ್ತಿದ್ದವರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 42 ಜನರನ್ನು ಬಂಧಿಸಿದ್ದಾರೆ.

ಸಿಂಚನ ಕ್ಲಬ್ ಮಾಲೀಕ ಶ್ರೀನಿವಾಸ್ ಸೇರಿ 25ಜನರನ್ನು ಬಂಧಿಸಲಾಗಿದ್ದು, 61,200ರೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಅರಸಿಕೆರೆಯಲ್ಲಿರುವ ಕ್ಲಬ್ ನಲ್ಲಿ ಸದಸ್ಯರಲ್ಲದವರು ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು.

ಅಲ್ಲದೇ, ಸಾಂಕ್ರಾಮಿಕ ರೋಗ ತಡೆಗಟ್ಟಲು ಹಿನ್ನೆಲೆಯಲ್ಲಿ ನಗರದ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶ ಉಲ್ಲಂಘಿಸಿ, ಸಾರ್ವಜನಿಕ ರು ಒಂದೆಡೆ ಸೇರಿ ಜೂಜಾಡಲು ಅವಕಾಶ ಮಾಡಿಕೊಟ್ಟ ಕಾರಣ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಸ್ಕೈಲೈನ್ ಕ್ಲಬ್ ಮೇಲೂ ಸಿಸಿಬಿ ಪೊಲೀಸರು ದಾಳಿ ನಡೆಸಿ, 16 ಜನರನ್ನು ಬಂಧಿಸಿದ್ದಾರೆ.

ಕ್ಲಬ್ ಸೆಕ್ರೆಟರಿ ಶ್ರೀನಿವಾಸ್ ಸೇರಿ 16 ಜನರನ್ನು ಬಂಧಿಸಲಾಗಿದ್ದು, 2, 11.500 ರೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸವೇಶ್ವರ ನಗರದ ಸ್ಕೈಲೆನ್ ಕ್ಲಬ್ ನಲ್ಲಿ ಸದಸ್ಯರಲ್ಲದವರು ಜೂಜಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿದ್ದರು. ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಬಿ ವಿಶೇಷ ವಿಚಕ್ಷಣ ದಳದ ಸಹಾಯಕ ಪೊಲೀಸ್ ಆಯುಕ್ತ ಡಿಟಿ ವಿರೂಪಾಕ್ಷಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT