ಬೆಂಗಳೂರು ನಗರ 
ರಾಜ್ಯ

ಕೊರೋನಾ ಭೀತಿ: ಬೆಂಗಳೂರು ನಗರ ಸಂಪೂರ್ಣ ಸ್ತಬ್ಧಗೊಳಿಸಲು ಚಿಂತನೆ?

ಕೊರೋನಾ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ  ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು: ಕೊರೋನಾ ಸೋಂಕು ಹರಡುವಿಕೆ ತಡೆಯಲು ಬೆಂಗಳೂರು ನಗರದ ಜನತೆ ಮನೆಯಿಂದ ಹೊರ ಬರದಂತೆ  ನಿರ್ಬಂಧ ಹೇರುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ಈ ಬಗ್ಗೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಲವು ಹೊಂದಿಲ್ಲ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ 2ನೇ ಹಂತದಲ್ಲಿ ಹರಡಿದ್ದು, ನಂತರ  ನಿಯಂತ್ರಿಸಲು ಸರ್ಕಾರಕ್ಕೆ ಕಷ್ಟವಾಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ಈ ರೀತಿಯ  ಆಲೋಚನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ವೈದ್ಯರು, ಪೊಲೀಸ್ ಹಾಗೂ ಪತ್ರಕರ್ತರಿಗೆ ಮಾತ್ರ ಕರ್ತವ್ಯದ ಹಿನ್ನೆಲೆಯಲ್ಲಿ ಮನೆಯಿಂದ ಹೊರ ಬರಲು  ಅವಕಾಶ ಕಲ್ಪಿಸಿ, ಬೇರೆ ಬೇರೆ ವೃತ್ತಿ ನಿರತರು ಹಾಗೂ ಸಾಮಾನ್ಯ ಜನರು ಅನಗತ್ಯವಾಗಿ  ಮನೆಯಿಂದ ಹೊರಗೆ ಬರುವುದಕ್ಕೆ ನಿರ್ಬಂಧ ಹೇರುವ ಸಾಧ್ಯತೆ ಬಗ್ಗೆ ಮಾತುಗಳು ಕೇಳಿಬರುತ್ತಿದೆ. 

 ದುಡಿಯವ ವರ್ಗ ಹಾಗೂ ಬಿಪಿಎಲ್  ಕಾರ್ಡ್ ಹೊಂದಿರುವವರಿಗೆ ಒಂದು ತಿಂಗಳ ವಿಶೇಷ ಪಡಿತರ ವ್ಯವಸ್ಥೆ ಕಲ್ಪಿಸಿ, ಅವರಿಗೆ  ನಿತ್ಯದ ಜೀವನೋಪಾಯಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಲು ಚಿಂತನೆ  ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT