ಹಲ್ಲೆಗೊಳಗಾದ ಪತ್ರಕರ್ತ 
ರಾಜ್ಯ

ಗಂಗಾವತಿ: ಅಕ್ರಮ ಮರಳು ಬಗ್ಗೆ ವರದಿ: ಪತ್ರಕರ್ತನ ಮೇಲೆ ಹಲ್ಲೆ

ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿ ಬರೆದ ಕಾರಣಕ್ಕೆ ಪತ್ರಕರ್ತ ಒಬ್ಬರ ಮೇಲೆ ಕೆಲವರು ಹಲ್ಲೆ‌ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ತಡರಾತ್ರಿ ನಡೆದಿದೆ.

ಗಂಗಾವತಿ: ಅಕ್ರಮ ಮರಳು ಸಾಗಾಣಿಕೆಯ ಬಗ್ಗೆ ವರದಿ ಬರೆದ ಕಾರಣಕ್ಕೆ ಪತ್ರಕರ್ತ ಒಬ್ಬರ ಮೇಲೆ ಕೆಲವರು ಹಲ್ಲೆ‌ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಗರದಲ್ಲಿ ತಡರಾತ್ರಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಮಾಸಪತ್ರಿಕೆಯೊಂದರ ಸಂಪಾದಕ ಹಾಗೂ ಕನ್ನಡಸೇನೆ ಸಂಘಟನೆಯ ಮುಖಂಡ ಚನ್ನಬಸವ ಜೆಕೀನ್ ಎಂದು ಗುರುತಿಸಲಾಗಿದೆ. 

ಗಾಯಾಳು ಇಲ್ಲಿನ‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಗರಠಾಣೆಯಲ್ಲಿ ಬಸವನಗೌಡ ಕಕ್ಕರಗೋಳ, ಹೈಯತ್ ಪೀರಾ ಹೆಬ್ಬಾಳ ಹಾಗೂ ಗಂಗಾವತಿಯ ಸ್ವಾಮಿ, ಉಮೇಶ, ನಾಗರಾಜ್ ಇತರೆ 15ಜನರ‌ ಮೇಲೆ ದೂರು ದಾಖಲಾಗಿದೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ  ಆಶ್ರಯದಲ್ಲಿ ಗಂಗಾವತಿಯಲ್ಲಿ ಮರಳು ದಂಧೆ ನಡೆಸಲಾಗುತ್ತಿದೆ ಎಂದು ಉಲ್ಲೇಖಿಸಿ ಚನ್ನಬಸವ ಜೇಕಿನ್ ವರದಿ ಬರೆದಿದ್ದನ್ನು ಆರೋಪಿಗಳು ಆಕ್ಷೇಪಿಸಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ವರದಿ: ಎಂ ಜೆ ಶ್ರೀನಿವಾಸ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT