ಹರತಾಳು ಹಾಲಪ್ಪ 
ರಾಜ್ಯ

ಮಂಗನ ಖಾಯಿಲೆಯಿಂದ ಜನ ತತ್ತರ; ಸ್ವಪಕ್ಷೀಯರಿಂದಲೇ ರಾಮುಲುಗೆ ಕ್ಲಾಸ್

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಂಗನ ಖಾಯಿಲೆಗೆ ತತ್ತರಿಸಿದ್ದು, ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪರಿಣಾಮ ವಿಧಾಸಭೆಯಲ್ಲಿ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟಕ್ಕೆ ಕಾರಣವಾಗಿತ್ತು

ಬೆಂಗಳೂರು: ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಂಗನ ಖಾಯಿಲೆಗೆ ತತ್ತರಿಸಿದ್ದು, ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪರಿಣಾಮ ವಿಧಾಸಭೆಯಲ್ಲಿ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟಕ್ಕೆ ಕಾರಣವಾಗಿತ್ತು.

ವಿಧಾನ ಮಂಡಲ ಅಧಿವೇಶದಲ್ಲಿ ಮಲೆನಾಡಿನಲ್ಲಿ ಮಂಗನ ಖಾಯಿಲೆಯಿಂದ ಮೃತಪಟ್ಟವರ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದಾಯಿತು. ಇದಕ್ಕೆ ಉತ್ತರ ನೀಡುವ ವೇಳೆ ಮಾಹಿತಿ ನೀಡಲು ಮುಂದಾದ ಆರೋಗ್ಯ ಸಚಿವ ಶ್ರೀರಾಮುಲು, “ಮಲೆನಾಡಿನಲ್ಲಿ ಕಳೆದ ವರ್ಷ 210 ಮಂಗನ ಖಾಯಿಲೆ ಪ್ರಕರಣ ದಾಖಲಾಗಿತ್ತು. ಈ ವರ್ಷ 419 ಪ್ರಕರಣ ದಾಖಲಾಗಿದೆ. ಈ ಪೈಕಿ 15 ಜನ ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದರು.

ಈ ವೇಳೆ ಗರಂ ಆದ ಸಾಗರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸಾವಿನ ಸಂಖ್ಯೆ 15 ಅಲ್ಲ 23 ನಾನು ದಾಖಲೆ ತರ್ತೀನಿ, ಸುಳ್ಳು ಸುಳ್ಳು ಉತ್ತರ ನೀಡಿದ್ರೆ ಹೊಟ್ಟೆ ಉರಿಯಲ್ವ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸಾವಿನ ಕೂಪವಾಗಿದೆ. ಅಲ್ಲಿ ಸತ್ತವರನ್ನು ಕನಿಷ್ಟ ಮರಣೋತ್ತರ ಪರೀಕ್ಷೆಯೂ ಮಾಡಲ್ಲ. ಅಲ್ಲದೆ ಅಧಿಕಾರಿಗಳು ಸಿಎಂಗೆ ತಪ್ಪು ಮಾಹಿತಿ ನೀಡುತ್ತಾರೆ” ಎಂದು ಕಿಡಿಕಾರಿದರು.

ಅಧಿವೇಶನದ ವೇಳೆ ಶಾಸಕ ಹಾಲಪ್ಪ ಅವರ ಆಕ್ರೋಶಕ್ಕೆ ಕೊನೆಗೂ ಮಣಿದ ಸಚಿವ ಶ್ರೀರಾಮುಲು "ಸಿಎಂ ಯಡಿಯೂರಪ್ಪ, ಈಶ್ವರಪ್ಪ ಮತ್ತು ಹರತಾಳು ಹಾಲಪ್ಪ ಅವರ ಜೊತೆ ಸಭೆ ನಡೆಸಿ ಇದಕ್ಕೆ ಸೂಕ್ತ ಪರಿಹಾರ ನೀಡಲಾಗುವುದು" ಎಂದು ಆಶ್ವಾಸನೆ ನೀಡಿದರು.

ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಂಗನಕಾಯಿಲೆ ಸಂಶೋಧನೆ ಮತ್ತು ಪರೀಕ್ಷೆಗಾಗಿ 5 ಕೋಟಿ ರು ಮೀಸಲಿಡಲಾಗಿತ್ತು, ಅದರೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

RSS centenary: ಪ್ರಪ್ರಥಮ ಬಾರಿಗೆ 'ಭಾರತ ಮಾತೆ'ಯ ಚಿತ್ರವುಳ್ಳ ರೂ.100 ನಾಣ್ಯ! ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ನಾನೇ ದಸರಾದಲ್ಲಿ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ಹೆಚ್ಚುವರಿ ತುಟ್ಟಿ ಭತ್ಯೆ, ಕೇಂದ್ರ ಸಂಪುಟ ಅನುಮೋದನೆ

Pakistan Army ವಿರುದ್ಧ ತಿರುಗಿ ಬಿದ್ದ POK ಜನತೆ, ಸೇನಾಧಿಕಾರಿಗಳ Kidnap, ಸೇನಾ ಟ್ರಕ್ ನದಿಗೆ! Video

Asia Cup 2025: BCCI ವಾಗ್ದಂಡನೆ ಎಚ್ಚರಿಕೆಗೆ ಹೆದರಿದ Mohsin Naqvi, UAE Boardಗೆ ಭಾರತದ ಟ್ರೋಫಿ ಹಸ್ತಾಂತರ: ವರದಿ

SCROLL FOR NEXT