ರಾಜ್ಯ

ಹುಟ್ಟೂರು ಹಲಗೇರಿಯಲ್ಲಿ ಪಾಪು ಅಂತ್ಯಕ್ರಿಯೆ :ಅಶೋಕ್

Shilpa D

ಹುಬ್ಬಳ್ಳಿ:  ಸೋಮವಾರ ರಾತ್ರಿ ನಿಧನರಾದ ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ಜರುಗಲಿದೆ .

ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಇಂದು ಬೆಳಗ್ಗೆ 9 ರಿಂದ 1 ರವರಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಪುತ್ರ ಅಶೋಕ್ ಪಾಟೀಲ್ ತಿಳಿಸಿದ್ದಾರೆ.

ನಂತರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಲಗೇರಿಯಲ್ಲಿ ನೇರೆವೇರಲಿದೆ ಎಂದು ಅವರು ಹೇಳಿದರು.
 

SCROLL FOR NEXT