ಪಾಟೀಲ್ ಪುಟ್ಟಪ್ಪ 
ರಾಜ್ಯ

ಮರಳಿ ಬಾರದೂರಿಗೆ 'ಪಾಪು' ಪಯಣ: ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಹಲಗೇರಿ: ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
 
ರಾಣೆಬೆನ್ನೂರು ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಾಪು ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.
 
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್ ಪುಟ್ಟಪ್ಪ ಅವರು ಸೋಮವಾರ ಹುಬ್ಬಳ್ಳಿಯಲ್ಲಿ ನಿಧನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT