ರಾಜ್ಯ

ಮರಳಿ ಬಾರದೂರಿಗೆ 'ಪಾಪು' ಪಯಣ: ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ

Vishwanath S

ಹಲಗೇರಿ: ಸೋಮವಾರ ನಿಧನರಾದ ನಾಡಿನ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
 
ರಾಣೆಬೆನ್ನೂರು ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಾಪು ಅವರ ಅಪಾರ ಅಭಿಮಾನಿಗಳು ಪಾಲ್ಗೊಂಡಿದ್ದರು.
 
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ್, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್ ಪುಟ್ಟಪ್ಪ ಅವರು ಸೋಮವಾರ ಹುಬ್ಬಳ್ಳಿಯಲ್ಲಿ ನಿಧನರಾದರು.

SCROLL FOR NEXT