ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಸೆಕ್ಸ್, ಮಜಾ ಮಾಡೋಕೆ ಸೈ, ಮದುವೆಗೆ ಮಾತ್ರ ಒಲ್ಲೆ ಎಂದ ಪ್ರಿಯಕರ, ದೂರು ದಾಖಲು!

ಆರು ವರ್ಷಗಳ ಕಾಲ ಪ್ರೀತಿಯ ಹೆಸರಲ್ಲಿ ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದಲ್ಲದೆ ಗರ್ಭಪಾತ ಸಹ ಮಾಡಿಸಿದ್ದ ಪ್ರಿಯಕರ ಇದೀಗ ಮದುವೆ ಮಾಡಿಕೊಳ್ಳಲು ಒಲ್ಲೆ ಎನ್ನುತ್ತಿದ್ದಾನೆ. ಇದರ ಜೊತೆಗೆ ಖಾಸಗಿ ಫೋಟೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿಯೋರ್ವಳು ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಬೆಂಗಳೂರು: ಆರು ವರ್ಷಗಳ ಕಾಲ ಪ್ರೀತಿಯ ಹೆಸರಲ್ಲಿ ತನ್ನ ಕಾಮದಾಟಕ್ಕೆ ಬಳಸಿಕೊಂಡಿದ್ದಲ್ಲದೆ ಗರ್ಭಪಾತ ಸಹ ಮಾಡಿಸಿದ್ದ ಪ್ರಿಯಕರ ಇದೀಗ ಮದುವೆ ಮಾಡಿಕೊಳ್ಳಲು ಒಲ್ಲೆ ಎನ್ನುತ್ತಿದ್ದಾನೆ. ಇದರ ಜೊತೆಗೆ ಖಾಸಗಿ ಫೋಟೋಗಳನ್ನು ಲೀಕ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಯುವತಿಯೋರ್ವಳು ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

30 ವರ್ಷದ ಯುವತಿ ಚಂದ್ರಲೇಔಟ್ ನಿವಾಸಿ ರವಿಚಂದ್ರ ವಿರುದ್ಧ ದೂರು ನೀಡಿದ್ದಾಳೆ. ಮದುವೆಯಾಗು ಎಂದು ಕೇಳಿದ್ದಕ್ಕೆ ಜೀವಬೆದರಿಕೆ ಹಾಕಿದ್ದಾನೆ. ಇದರ ಜೊತೆಗೆ ತಾವು ಏಕಾಂತದಲ್ಲಿದ್ದ ಫೋಟೋಗಳನ್ನು ಇದೀಗ ವೈರಲ್ ಮಾಡುವ ಬೆದರಿಕೆ ಹಾಕುತ್ತಿದ್ದಾನೆ ಎಂದು ದೂರಿದ್ದಾಳೆ. 

ಕಳೆದ ಆರು ವರ್ಷಗಳಿಂದ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿದ್ದ. ಮೊದಲ ಬಾರಿ ನನ್ನ ತಾಯಿ ಊರಿಗೆ ಹೋಗಿದ್ದಾಗ ಬಲವಂತವಾಗಿ ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದ. ನಿನ್ನನ್ನು ಬಿಟ್ಟು ಯಾರನ್ನು ಮದುವೆಯಾಗುವುದಿಲ್ಲ ಎಂದು ಹೇಳುತ್ತಿದ್ದ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಒಂದು ಸಾರಿ ನನಗೆ ಗರ್ಭಪಾತ ಸಹ ಮಾಡಿಸಿದ್ದ. ಮದುವೆಯಾಗು ಎಂದಾಗ ಇನ್ನು ನಾನು ಸೆಟಲ್ ಆಗಿಲ್ಲ. ಮನೆ ಕಟ್ಟಿಸಿ ನಂತರ ಮದುವೆಯಾಗೋಣ ಎಂದು ಹೇಳಿದ್ದ. ಆದರೆ ಫೆಬ್ರವರಿ 20ರಂದು ನನ್ನ ಮನೆಗೆ ಬಂದು ಮದುವೆಯಾಗುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಸಹ ಹಾಕಿದ್ದ ಎಂದು ದೂರಿದ್ದಳು. 

ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT