ಪ್ರಿಯಾಂಕ್‌ ಖರ್ಗೆ 
ರಾಜ್ಯ

ಇಟಲಿಯಲ್ಲಿರುವ ಕನ್ನಡಿಗರನ್ನು ಕರೆತನ್ನಿ: ಸದನದಲ್ಲಿ ಪ್ರಿಯಾಂಕ್ ಖರ್ಗೆ ಆಗ್ರಹ

ಕೊರೋನಾ ವೈರಸ್‌ ಸೋಂಕು ವ್ಯಾಪಕತೆಯಿಂದ ಭೀತರಾಗಿ ಸ್ವದೇಶಕ್ಕೆ ಮರಳಲು ಪರದಾಡುತ್ತಿರುವ ಕನ್ನಡಿಗರಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 

ಬೆಂಗಳೂರು: ಕೊರೋನಾ ವೈರಸ್‌ ಸೋಂಕು ವ್ಯಾಪಕತೆಯಿಂದ ಭೀತರಾಗಿ ಸ್ವದೇಶಕ್ಕೆ ಮರಳಲು ಪರದಾಡುತ್ತಿರುವ ಕನ್ನಡಿಗರಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನಸಭೆಯಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 

ಇಟಲಿಯ ರೋಮ್‌ ವಿಮಾನ ನಿಲ್ದಾಣದಲ್ಲಿ ತುದಿಗಾಲ ಮೇಲೆ ನಿಂತಿರುವ 400 ಕ್ಕೂ ಹೆಚ್ಚು ಕನ್ನಡಿಗರ ರಕ್ಷಣೆಯ ಭರವಸೆಯನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ನೀಡಿದೆ.

ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ ವಿಷಯ ಪ್ರಸ್ತಾಪಿಸಿ "ಇಟಲಿಯಲ್ಲಿ ಸೋಂಕು ವ್ಯಾಪಕತೆಯಿಂದಾಗಿ ಸಾವಿರಾರು ಭಾರತೀಯರು ಸ್ವದೇಶಕ್ಕೆ ಮರಳುತ್ತಿದ್ದಾರೆ. ಅವರಲ್ಲಿ 150 ವಿದ್ಯಾರ್ಥಿಗಳು ಸೇರಿ 400 ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ.

ಆದರೆ, ಸೋಂಕು ಇಲ್ಲ ಎಂಬ ದೃಢೀಕರಣ ಇಲ್ಲದೆ ವಿಮಾನ ಹತ್ತಲು ಅವಕಾಶ ಕೊಡದ ಕಾರಣ ವಿಮಾನ ನಿಲ್ದಾಣಗಳಲ್ಲಿ ಅತಂತ್ರರಾಗಿ ಉಳಿದಿದ್ದಾರೆ. ರಾಯಭಾರಿ ಕಚೇರಿಯೂ ಅವರ ನೆರವಿಗೆ ಬರುತ್ತಿಲ್ಲ," ಎಂದು ಸದನದ ಗಮನ ಸೆಳೆದರು.

ಇದಕ್ಕೆ ಡಿಸಿಎಂ ಅಶ್ವತ್ಥ ನಾರಾಯಣ ಉತ್ತರ ನೀಡಿ "ಮಿಲಾನ್‌ ವಿಮಾನ ನಿಲ್ದಾಣದಿಂದ ಕನ್ನಡಿಗರನ್ನು ವಾಪಸ್‌ ಕರೆತರಲಾಗಿದೆ. ಆದರೆ, ರೋಮ್‌ನಲ್ಲಿ ರಕ್ತ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ. ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ನಿಟ್ಟಿನಲ್ಲಿ ಪೂರ್ಣ ಗಮನ ಹರಿಸಿದೆ'' ಎಂದು ಭರವಸೆ ನೀಡಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT