ಸಾಂದರ್ಭಿಕ ಚಿತ್ರ 
ರಾಜ್ಯ

ಅಮಾಯಕರ ನಿವೇಶನ ಕಬಳಿಸಲು ಯತ್ನ: ವಂಚಕ ಸ್ಟಾಂಪ್ ವಿನಿ ಬಂಧನ

ಅಮಾಯಕರ ನಿವೇಶನಗಳನ್ನು ಕಬಳಿಸಲು ಹೊಂಚು ಹಾಕಿದ್ದ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಅಮಾಯಕರ ನಿವೇಶನಗಳನ್ನು ಕಬಳಿಸಲು ಹೊಂಚು ಹಾಕಿದ್ದ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ

ಪ್ರಮುಖ ಆರೋಪಿ ಲಗ್ಗೆರೆ ಕೆಂಪೇಗೌಡ ಲೇಔಟ್‌ ನ4ನೇ ಮೈನ್‌ ನಿವಾಸಿ ವಿನಯ್ ಕುಮಾರ್ ಅಲಿಯಾಸ್ ಸ್ಟಾಂಪ್ ವಿನಿ ಬಂಧಿತ ಆರೋಪಿ

ಘಟನೆಯ ವಿವರ: ರೂಪಲಕ್ಷ್ಮಿ ಎಂಬವರು ಬಸವೇಶ್ವರನಗರದ ಕುರುಬರಹಳ್ಳಿ ಕರ್ನಾಟಕ ಲೇಔಟ್‌ನ ನಿವೇಶನವೊಂದರ ಮಾಲೀಕರಾಗಿದ್ದು, ಅಮೆರಿಕದಲ್ಲಿ ವಾಸವಾಗಿದ್ದಾರೆ. 

ಈ ಬಗ್ಗೆ ಮಾಹಿತಿ ಪಡೆದ ಆರೋಪಿಗಳಾದ ವಿನಯ್ ಕುಮಾರ್, ವಿಶ್ವನಾಥ್ ಹಾಗೂ ಇತರರು ಈ ನಿವೇಶನಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ನಕಲಿಯಾಗಿ ಸೃಷ್ಟಿಸಿಕೊಂಡು ಶಿವಮ್ಮ ಎಂಬವರಿಗೆ ಹಣದ ಆಮಿಷವೊಡ್ಡಿ ಸಬ್‌ ರಿಜಿಸ್ಟ್ರಾರ್ ಕಚೇರಿಗೆ ಕರೆದೊಯ್ದು ಆಕೆಯನ್ನು ಮೂಲ ಮಾಲೀಕಳೆಂದು ಬಿಂಬಿಸಿ  ಈ ಸೈಟನ್ನು ಆರೋಪಿ ರಾಜ್ ಚಂದ್ರಶೇಖರ್ ಎಂಬಾತನ ಹೆಸರಿಗೆ ನೋಂದಣಿ ಮಾಡಿಸಿದ್ದಾರೆ. 

ಈ ಮೂಲಕ ಅಕ್ರಮ ಹಣ ಸಂಪಾದನೆ ಮಾಡಿಕೊಂಡಿದ್ದರು. ಈ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT