ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ವೈರಸ್: ಮಾರ್ಗಸೂಚಿ ಉಲ್ಲಂಘಿಸಿವುದು ಶಿಕ್ಷಾರ್ಹ ಅಪರಾಧ - ಆರೋಗ್ಯ ಇಲಾಖೆ ಎಚ್ಚರಿಕೆ

ಕೊರೋನಾ ಸೋಂಕು ದೃಢಪಟ್ಟವರವನ್ನು ಪ್ರತ್ಯೇಕವಾಗಿ ಮನೆಯಲ್ಲಿಟ್ಟು ಚಿಕಿತ್ಸೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊಡಿಸಿದೆ.

ಬೆಂಗಳೂರು: ಕೊರೋನಾ ಸೋಂಕು ದೃಢಪಟ್ಟವರವನ್ನು ಪ್ರತ್ಯೇಕವಾಗಿ ಮನೆಯಲ್ಲಿಟ್ಟು ಚಿಕಿತ್ಸೆ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊಡಿಸಿದೆ.

ಪ್ರತೇಕ ಮನೆಯಲ್ಲಿ ನಿಗಾ ಮತ್ತಿತರ ಸೂಚನೆಗಳನ್ನು ಪಾಲಿಸದಿದ್ದಲ್ಲಿ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ೧೯೮೫ ಮತ್ತಿತರ ಕರ್ನಾಟಕ ಸರ್ಕಾರದ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಆರೋಗ್ಯ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಸೋಂಕು ಪತ್ತೆಯಾದ ಅಥವಾ ಶಂಕಿತರನ್ನು ಪ್ರತ್ಯೇಕ ಮನೆಯಲ್ಲಿಟ್ಟು ನಿಗಾವಹಿಸುತ್ತಿದ್ದ ಸಂದರ್ಭದಲ್ಲಿ ಸೋಂಕು ಹರಡದಂತೆ ಅನುಸರಿಸಬೇಕಾದ ಕ್ರಮಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಮಾರ್ಗಸೂಚಿ ಜಾರಿಮಾಡಿದ್ದಾರೆ. 

ಪ್ರತ್ಯೇಕ ಶೌಚಾಲಯ ಹೊಂದಿರುವ ಉತ್ತಮ ಗಾಳಿ-ಬೆಳಕು ಹೊಂದಿರುವ ಕೊಠಡಿಯಲ್ಲಿ ಸೋಂಕಿತರು ಅಥವಾ ಶಂಕಿತರನ್ನು ಇರಿಸಿ ನಿಗಾ ವಹಿಸಬೇಕು. ಒಂದು ವೇಳೆ ಕುಟುಂಬದ ಇನ್ನಿತರ ಸದಸ್ಯರು ಇದೇ ಕೊಠಡಿಯಲ್ಲಿ ಉಳಿಯುವ ಅಗತ್ಯಬಿದ್ದಲ್ಲಿ ಇಬ್ಬರ ನಡುವೆ ಕನಿಷ್ಠ ೧ ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಸೋಪ್, ನೀರು ಅಥವಾ ಸ್ಯಾನಿಟೈಸರ್ ನಿಂದ ಆಗಿಂದಾಗ್ಗೆ ಕೈಗಳನ್ನು ಶುಚಿಗೊಳಿಸಬೇಕು, ಸೋಂಕಿತರನ್ನು ಮನೆಯಲ್ಲಿಯೂ ಎಲ್ಲಿಯೂ ಹೋಗದಂತೆ ನಿರ್ಬಂಧಿಸಬೇಕು ಎಂದು ಹೇಳಿದೆ. 

ಯಾವಾಗಲೂ ಸರ್ಜಿಕಲ್ ಮಾಸ್ಕ್ ಧರಿಸಬೇಕು, ೬-೮ ಗಂಟೆಗಳಿಗೊಮ್ಮೆ ಮಾಸ್ಕ್ ಗಳನ್ನು ಬದಲಾವಣೆ ಮಾಡಬೇಕು, ಬಳಸಲಾದ ಮಾಸ್ಕ್ ಗಳನ್ನು ವಿಲೇವಾರಿ ಮಾಡಬೇಕು, ಸೋಂಕಿತರು ಅಥವಾ ಅವರನ್ನು ಉಪಚರಿಸಿದವರು ಬಳಸಿದ ಮಾಸ್ಕ್ ಗಳನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು ಅಥವಾ ಆಳವಾದ ಮಣ್ಣಿನಲ್ಲಿ ಹೂಳಬೇಕು ಎಂದು ಸೂಚಿಸಲಾಗಿದೆ. 

ಸೋಂಕಿನ ಲಕ್ಷಣ ಕಂಡುಬಂದವರು ಮನೆಯಲ್ಲಿರುವ ಹಿರಿಯರು, ಗರ್ಭಿಣಿಯರು, ಮಕ್ಕಳು ಮತ್ತು ಅಸ್ತಮಾ, ಮಧುಮೇಹ ಮತ್ತಿತರ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರಿಂದ ದೂರ ಇರಬೇಕು, ಮದುವೆ, ಸಮಾರಂಭಗಳಲ್ಲಿ ಭಾಗವಹಿಸಬಾರದು, ಕುಡಿಯುವ ನೀರಿನ ಲೋಟಗಳು, ಊಟದ ತಟ್ಟೆ, ಟವಲ್, ಹಾಸಿಗೆ ಇನ್ನಿತರ ವಸ್ತುಗಳನ್ನು ಮನೆಯಲ್ಲಿರುವ ಇತರರೊಂದಿಗೆ ಹಂಚಿಕೊಳ್ಳಬಾರದು, ಪ್ರತ್ಯೇಕ ಮನೆಯಲ್ಲಿಟ್ಟು ನಿಗಾ ವಹಿಸಲು ಕುಟುಂಬದಲ್ಲಿನ ಒಬ್ಬ ವ್ಯಕ್ತಿಯನ್ನು ಮಾತ್ರ ನಿಯೋಜಿಸಬೇಕು ಎಂದಿದೆ. 

ಅಂತವರು ಹಸ್ತಲಾಘವ ಮಾಡಬಾರದು, ವಿಲೇವಾರಿ ಮಾಡುವಂತಹ ಕೈಗವಸುಗಳನ್ನು ಕೈಗಳಿಗೆ ಹಾಕಿಕೊಳ್ಳಬೇಕು, ಗ್ಲೌಸ್ ಗಳನ್ನು ತೆಗೆದ ನಂತರ ಸೋಪ್ ಮತ್ತು ನೀರಿನಿಂದ ಕೈಗಳನ್ನು ತೊಳೆದುಕೊಳ್ಳಬೇಕು, ಜ್ವರ, ನೆಗಡಿ, ಕೆಮ್ಮು ಮತ್ತಿತರ ಲಕ್ಷಣ ಕಂಡುಬಂದಲ್ಲಿ ಅಂತಹವರನ್ನು ವೈದ್ಯರ ಪರೀಕ್ಷೆ ವರದಿ ಬರುವವರೆಗೂ ೧೪ ದಿನಗಳ ಕಾಲ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಿ ನಿಗಾ ವಹಿಸಬೇಕು ಎಂದು ಹೇಳಿದೆ.

ಕೊರೋನಾ ಸೋಂಕಿನ ಬಗ್ಗೆ ಮಾಹಿತಿಗಾಗಿ ಈಗಾಗಲೇ ಇರುವ ೧೦೪ ಸಹಾಯವಾಣಿ ಜೊತೆಗೆ ೦೮೦-೪೬೮೪೮೬೦೦ ಮತ್ತೊಂದು ಸಹಾಯವಾಣಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತೆರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ