ವಿಮಾನ ನಿಲ್ದಾಣ 
ರಾಜ್ಯ

ಕೊರೋನಾ ವೈರಸ್: ವಿದೇಶದಿಂದ ಬರುವ ಪ್ರಯಾಣಿಕರಿಗೆ ಮುದ್ರೆ

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಕೊರೋನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಕ್ಯಾಟಗರಿ ಪ್ರಯಾಣಿಕರಿಗೆ ಮುದ್ರೆ ಒತ್ತಿ ಕಳುಹಿಸಲಾಗುತ್ತಿದೆ

ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಆಗಮಿಸುವ ಕೊರೋನಾ ಶಂಕಿತ ಸಿ-ವರ್ಗದ ಪ್ರಯಾಣಿಕರಿಗೆ ಕಡ್ಡಾಯ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಲಾಗಿದೆ. ಈ ಕ್ಯಾಟಗರಿ ಪ್ರಯಾಣಿಕರಿಗೆ ಮುದ್ರೆ ಒತ್ತಿ ಕಳುಹಿಸಲಾಗುತ್ತಿದೆ

ವಿದೇಶದಿಂದ ಸ್ವದೇಶಕ್ಕೆ ಬರುವ ಕೊರೋನಾ ಶಂಕಿತರಿಗೆ ಸ್ಕ್ರೀನಿಂಗ್ ಮತ್ತು ಸ್ಟಾಂಪಿಂಗ್ ವ್ಯವಸ್ಥೆ ಮಾಡಿದ್ದು, ಇಂದು ಬಂದಿರುವ ಪ್ರಯಾಣಿಕರು ಏಪ್ರಿಲ್ 3 ರ ವರೆಗೆ ಮನೆಯಲ್ಲಿಯೇ ಪ್ರತ್ಯೇಕ ಚಿಕಿತ್ಸೆ ಪಡೆಯಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ

ಕಳೆದ ರಾತ್ರಿಯಿಂದ ಬಂದ 226 ಸಿ-ವರ್ಗದ ಪ್ರಯಾಣಿಕರಿಗೆ ದಿನಾಂಕ ಸಮೇತ ಬಲಗೈಗೆ ಸ್ಟಾಂಪಿಂಗ್ ಹಾಕಿ ಮನೆಗೆ ಕಳುಹಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ಕಳೆದ ಮಾರ್ಚ್ 13 ರಿಂದ ಇಲ್ಲಿಯವರೆಗೆ ವಿದೇಶಗಳಿಂದ ಬಂದ 744 ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. 744 ಪ್ರಯಾಣಿಕರಲ್ಲಿ ಎ-ವರ್ಗದಲ್ಲಿ 11, ಬಿ-ವರ್ಗದಲ್ಲಿ 28 ಇದ್ದು ಅದರಲ್ಲಿ ಸಿ-ವರ್ಗದ 704 ಪ್ರಯಾಣಿಕರ ಸಂಪೂರ್ಣ ಮಾಹಿತಿ ಪಡೆದು ಅವರ ವಾಸಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ

ವಿದೇಶದಿಂದ ಬಂದವರ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಲ್ಲಿ ಚಿಕಿತ್ಸೆಗೆ ಆಗಮಿಸುವಂತೆ ಸೂಚಿಸಲಾಗಿದೆ. ಬಿ-ವರ್ಗದಲ್ಲಿ 17 ಪ್ರಯಾಣಿಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈವರೆಗೂ ಸೋಂಕು ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT