ಸಂಗ್ರಹ ಚಿತ್ರ 
ರಾಜ್ಯ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆ ಓಡಾಟ: ಸಿಬ್ಬಂದಿ, ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಕೊರೋನಾ ಸೋಂಕಿತ ಯುವತಿಯೊಬ್ಬಳು ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿ, ಆಸ್ಪತ್ರೆಯ ಸುತ್ತಮುತ್ತ ಓಡಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. 

ಬೆಂಗಳೂರು: ಕೊರೋನಾ ಸೋಂಕಿತ ಯುವತಿಯೊಬ್ಬಳು ವಿಕ್ಟೋರಿಯಾ ಆಸ್ಪತ್ರೆಯ ನೆಫ್ರೋಯುರಾಲಜಿ ಸಂಸ್ಥೆಗೆ ಭೇಟಿ ನೀಡಿ, ಆಸ್ಪತ್ರೆಯ ಸುತ್ತಮುತ್ತ ಓಡಾಟ ನಡೆಸಿದ ಘಟನೆ ನಡೆದಿದ್ದು, ಘಟನೆಯಿಂದಾಗಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. 

ಲಂಡನ್  ನಿಂದ ಮಾ.14ರಂದು ನಗರಕ್ಕೆ ಆಗಮಿಸಿದ್ದ 20 ವರ್ಷದ ಯುವತಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿತ್ತು. ಈ ಸೋಂಕಿತ ಯುವತಿ ವಿಕ್ಟೋರಿಯಾ ಆಸ್ಪತ್ರೆ ಆವರಣದದಲ್ಲಿ ಓಡಾಡಿಗ್ಗು, ಇದೀಗ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳು ತೀವ್ರ ಆತಂಕಕ್ಕೀಡಾಗುವಂತೆ ಮಾಡಿದೆ. 

ಯುವತಿಯು ಆಸ್ಪತ್ರೆಯ ನೆಫ್ರೋ ವಿಭಾಗದ ಮುಖ್ಯಸ್ಥ ಡಾ.ಉಮೇಶ್ ಸಂಬಂಧಿ ಎಂದು ಹೇಳಲಾಗುತ್ತಿದೆ. ಮಾ.14ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಯುವತಿಗೆ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ. ಹೀಗಾಗಿ ಕಡ್ಡಾಯವಾಗಿ 14 ದಿನ ಮನೆಯಲ್ಲಿಯೇ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿತ್ತು. ಆದರೆ, ಇದನ್ನು ಉಲ್ಲಂಘಿಸಿ ಯುವತಿಯು ಮಾ.14 ರಂದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊದಿಗೆ ಮಾತುಕತೆ ನಡೆಸಿದ್ದಾರೆ. 

ಉಮೇಶ್ ಅವರು ಡಯಾಲಿಸಿಸ್ ವಿಭಾಗ ಸೇರಿದಂತೆ ಆಸ್ಪತ್ರೆಯ ಎಲ್ಲಾ ವಿಭಾಗಗಳಿಗೂ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಅಲ್ಲದೆ, ಸೋಂಕಿತ ಯುವತಿ ಜೊತೆ ಪ್ರಾಥಮಿಕ ಸಂಪರ್ಕ ಸಾಧಿಸಿದ್ದ ಉಮೇಶ್ ಅವರು ಇತರೆ ಇಬ್ಬರು ವೈದ್ಯರೊಂದಿಗೆ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಆಸ್ಪತ್ರೆಯ ಇತರೆ ವೈದ್ಯರು ಹಾಗೂ ಸಿಬ್ಬಂದಿ ಮತ್ತು ಕೆಲ ರೋಗಿಗಳು ಸೇರಿದಂತೆ ನೂರಾರು ಜನರ ಸಂಪರ್ಕ ಮಾಡಿದ್ದಾರೆ. 

ಯುವತಿಗೆ ಸೋಂಕು ದೃಢಪಟ್ಟಿ ಮಾಹಿತಿ ಹೊರ ಬರುತ್ತಲೇ ಈ ಮೂವರು ವೈದ್ಯರು ನಾಪತ್ತೆಯಾಗಿದ್ದಾರೆ. ಇದರಿಂದ ಆಸ್ಪತ್ರೆಯ ವೈದ್ಯರು, ರೋಗಿಗಳು ಸೇರಿದಂತೆ ನಗರದ ಜನರದಲ್ಲಿ ಆತಂಕ ಹೆಚ್ಚಾಗಿದೆ. 

ನೆಫ್ರೋ ಯುರಾಲಜಿ ಸಂಸ್ಥೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯದಿಂದ ಡಯಾಲಿಸಿಸ್ ಹಾಗೂ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆಂದು ನಿತ್ಯ ನೂರಾರು ಮಂದಿ ಬರುತ್ತಾರೆ. ಈ ರೋಗಿಗಳಿಗೆ ಸೋಂಕು ಹರಡದಂತೆ ಎಷ್ಟು ಎಚ್ಚರ ವಹಿಸಿದರೂ ಸಾಲದು. ಹೀಗಿರುವಾಗ ಖುದ್ದು ವೈದ್ಯರೇ ಈ ರೀತಿ ಮಾಡಿರುವುದರಿಂದ ಎಲ್ಲಾ ಸಿಬ್ಬಂದಿ ಹಾಗೂ ರೋಗಿಗಳನ್ನು ತಪಾಸಣೆಗೆ ಒಳಪಡಿಸುವ ಒತ್ತಾಯ ಕೇಳಿ ಬರುತ್ತಿದೆ. 

ಪ್ರಸ್ತುತ ವೈದ್ಯರಿಗೂ ವೈರಸ್ ಲಕ್ಷಣಗಳು ಕಂಡು ಬಂದಿದ್ದು, ಪರೀಕ್ಷೆ ನಡೆಸಲಾಗಿದೆ. ಪ್ರಸ್ತುತ ಅಧಿಕಾರಿಗಳು ವರದಿಗಾಗಿ ಕಾಯುತ್ತಿದ್ದು, ವೈದ್ಯರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?