ಹಂಪಿಯಲ್ಲಿ ವಾನರ ಸೇನೆ 
ರಾಜ್ಯ

ಹಂಪಿಯಲ್ಲಿ ಪ್ರವಾಸಿಗರಿಗೆ ನಿರ್ಬಂಧ: ಆಹಾರ-ನೀರಿಗಾಗಿ ಪರದಾಡುತ್ತಿರುವ ವಾನರಗಳಿಗೆ ಮಾನವನ ಸಹಾಯಹಸ್ತ!

ರಾಜ್ಯದಲ್ಲೂ ಕೊರೋನಾ ಭೀತಿ ತಾರಕಕ್ಕೇರಿದ್ದು, ನಿರ್ಬಂಧ ಮತ್ತು ಸರ್ಕಾರ ಕೈಗೊಂಡ ಮುಂಜಾಗ್ರತಾ ಕ್ರಮಗಳಿಂದಾಗಿ ಮಾನವರಷ್ಟೇ ಅಲ್ಲ ವನ್ಯಜೀವಿಗಳೂ ಕೂಡ ಪರದಾಡುವಂತಾಗಿದೆ.

ಹೊಸಪೇಟೆ: ರಾಜ್ಯದಲ್ಲೂ ಕೊರೋನಾ ಭೀತಿ ತಾರಕಕ್ಕೇರಿದ್ದು, ನಿರ್ಬಂಧ ಮತ್ತು ಸರ್ಕಾರ ಕೈಗೊಂಡ ಮುಂಜಾಗ್ರತಾ ಕ್ರಮಗಳಿಂದಾಗಿ ಮಾನವರಷ್ಟೇ ಅಲ್ಲ ವನ್ಯಜೀವಿಗಳೂ ಕೂಡ ಪರದಾಡುವಂತಾಗಿದೆ.

ಕೊರೋನ ಭೀತಿಯಿಂದ ದೇಶದ ಪ್ರತಿಯೊಂದು ಪ್ರವಾಸಿ ಸ್ಥಳಗಳಿಗೆ ಮತ್ತು ದೇವಸ್ಥಾನಗಳ ಪ್ರವೇಶಕ್ಕೆ ಸಾವರ್ಜನಿಕರಿಗೆ ನಿರ್ಭಂದ ಹೇರಲಾಗಿದ್ದು, ಇದರಿಂದ ಅವಲಂಬಿತರಾಗಿರುವ ಬಹುತೇಕ ವ್ಯಾಪಾರಿಗಳು ಮತ್ತು ದೇವಸ್ಥಾನದ ಅರ್ಚಕರು ಆದಾಯ ಇಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅದೇ ರೀತಿ ದೇವಸ್ಥಾನಕ್ಕೆ ಬರುವ ಭಕ್ತರು ಮತ್ತು ಪ್ರವಾಸಿಗರು ಕೊಡುವ ತಿಂಡಿ ತಿನಿಸು ಹಣ್ಣುಗಳನ್ನೇ ನೆಚ್ಚಿಕೊಂಡು ಜೀವಿಸುತಿದ್ದ ಹಂಪಿಯ ವಾನರ ಸೈನ್ಯ ಇದೀಗ ಹಸಿವಿನಿಂದ ನರಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೌದು ನಮ್ಮ ದೇಶದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಅತಿಹೆಚ್ಚು ವಾನರ ಸೈನ್ಯ ಕಂಡು ಬರುವ ಸ್ಥಳಗಳಲ್ಲಿ ವಿಶ್ವ ವಿಖ್ಯಾತ ಹಂಪಿ ಕೂಡ ಒಂದು. ಹಂಪಿಯ ಪ್ರವಾಸಕ್ಕೆ ನಿರ್ಬಂಧ ಹೇರಿರುವುದರಿಂದ ಯಾವೊಬ್ಬ ಪ್ರವಾಸಿಗರು ಇತ್ತ ಮುಖಮಾಡುತ್ತಿಲ್ಲ. ಸಾವಿರ ಸಾವಿರ ಸಂಖ್ಯೆಯಲ್ಲಿ ವಾಸವಾಗಿರುವ ಎರಡು ಬಗೆಯ ಕೋತಿಗಳಿಗೆ ಕಳೆದ ಒಂದು ವಾರದಿಂದ ಆಹಾರವೇ ಸಿಗುತ್ತಿಲ್ಲ. ಪರಿಣಾಮ ಕೋತಿಗಳು ಹಸಿವಿನಿಂದ ಬಳಲಿ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಕಲ್ಲು ಕಂಬಗಳ ಮದ್ಯ ಒರಗಿಕೊಂಡು ಮಲಗುವ ದೃಶ್ಯ ಸರ್ವೇ ಸಾಮಾನ್ಯವಾಗಿ ಕಾಣುತ್ತಿದೆ.

ಇದನ್ನ ಮನಗಂಡ ಇಲ್ಲಿನ ಸ್ಥಳೀಯ ಪ್ರವಾಸಿ ಮಿತ್ರ ಗಾರ್ಡ್ ಗಳು ಹಸಿದಿರುವ ವಾನರ ಸೈನ್ಯಕ್ಕೆ ಹಣ್ಣು ಹಂಪಲು ನೀಡುವ ಮೂಲಕ ಮಂಗಗಳ ಹಸಿವನ್ನು ನೀಗಿಸುವ ಕಾರ್ಯ ಮಾಡುತ್ತಿದ್ದಾರೆ. ಇನ್ನು ಈ ರೀತಿಯಾಗಿ ಪ್ರಾಣಿಗಳಿಗೆ ಹಣ್ಣು ತಿಂಡಿ ತಿನಿಸುಗಳನ್ನ ನೀಡುವುದು ಅರಣ್ಯ ಇಲಾಖೆಯ ನಿಯಮಕ್ಕೆ ವಿರುದ್ದವಾಗಿದ್ದರೂ ಅನಿವಾರ್ಯವಾಗಿ ಕೊಡಲೇಬೇಕಾದ ಪರಿಸ್ಥಿತಿ ಇಲ್ಲಿದೆ.

ಇಲ್ಲಿರುವ ಯಾವೊಂದು ಕೋತಿಗಳು ಹಂಪಿಯ ಪರಿಸರ ಬಿಟ್ಟು ಅಕ್ಕ ಪಕ್ಕದ ಕಾಡಿಗೆ ಹೋಗಿ ಆಹಾರ ಹುಡುಕಿ ತಿನ್ನುವುದಿಲ್ಲ, ಕಾರಣ ಅಕ್ಕಪಕ್ಕದ ಕಲ್ಲುಗುಡ್ಡಗಳಲ್ಲಿ ಚಿರತೆಗಳು ಹೆಚ್ಚಾಗಿ ಅಡಗಿಕೊಂಡಿದ್ದು ಒಂದು ವೇಳೆ ಚಿರತೆಗಳ ಕಣ್ಣಿಗೆ ಕೋತಿಗಳು ಬಿದ್ದರೆ ಚಿರತೆಗೆ ಬಲಿಯಾಗಿಬಿಡುತ್ತವೆ. ಈ ಭಯದಿಂದ ಇಲ್ಲಿನ ಕೋತಿಗಳು ಹಸಿವಿನಿಂದ ಬಳಲಿದರೂ ಜನನಿಬಿಡ ಪ್ರದೇಶ ಬಿಟ್ಟು  ಅಕ್ಕ ಪಕ್ಕದ ಕಾಡಿಗೆ ಹೋಗುವುದಿಲ್ಲ.  ಹಾಗಾಗಿ ಇಲ್ಲಿರುವ ವಾನರ ಸೈನ್ಯಕ್ಕೆ ಮಾನವನ ಸಹಾಯ ಹಸ್ತ ಬೇಕಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT