ಎಚ್.ಡಿ.ಕುಮಾರಸ್ವಾಮಿ 
ರಾಜ್ಯ

ಕೇರಳ ಮಾದರಿ ಅನುಸರಿಸಿ, ಬಡವರ ನೆರವಿಗೆ ಬನ್ನಿ: ಕೊರೋನಾ ಕುರಿತು ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಕಿವಿಮಾತು

ಕೊರೋನಾವೈರಸ್ ಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ಆರ್ಥಿಕತೆಗೆ ನೆರೆಯ ಕೇರಳದ ಮಾದರಿಯನ್ನು ಅನುಸರಿಸಿ ಚೈತನ್ಯ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖ್ಯ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ. 

ಬೆಂಗಳುರು: ಕೊರೋನಾವೈರಸ್ ಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ಆರ್ಥಿಕತೆಗೆ ನೆರೆಯ ಕೇರಳದ ಮಾದರಿಯನ್ನು ಅನುಸರಿಸಿ ಚೈತನ್ಯ ತರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖ್ಯ ನಾಯಕರಾದ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.

ಕೊರೋನಾ ಕುರುರಿತು ನೆರೆಯ ಕೇರಳ ರಾಜ್ಯದಲ್ಲಿ ಅನುಸರಿಸಿದ ಮಾದರಿಯನ್ನೇ ಕರ್ನಾಟಕದಲ್ಲಿಯೂ ಅಳವಡಿಸಿಕೊಳ್ಲಬೇಕೆಂದು ಆಗ್ರಹಿಸಿರುವ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಲಹೆ ಕೊಟ್ಟಿದ್ದಾರೆ.

"ಕೊರೋನಾವೈರಸ್ ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ ₹20,000 ಕೋಟಿ ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, MGNREGSಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ, ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ?

"ಕೇರಳದಲ್ಲಿ 26 ಕೊರೊನಾ ಪ್ರಕರಣ ವರದಿಯಾಗಿದ್ದರೆ ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ.ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ.ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು.

"ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು. 

"ಕೊರೊನಾ ವೈರಸ್ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು." ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, MGNREGSಗೆ ಅನುದಾನ, ಪರಿಹಾರ ಘೋಷಣೆಯಂಥ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜೊತೆಗೆ ಕೊರೋನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು.
(3/4)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಹತ್ಯೆ; ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರ ಕೊಲೆ

ಲೆಬನಾನ್‌ನಲ್ಲಿ ನಾಗರಿಕರ ಸಾವಿನ ಘಟನೆಗಳ ಬಗ್ಗೆ ಭಾರತ ಕಳವಳ; ಇಸ್ರೇಲ್ ಗೆ ತೀವ್ರ ಹಿನ್ನಡೆ!

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

SCROLL FOR NEXT