ತಿಮ್ಮಕ್ಕ, ಎಸ್ ಎಲ್ ಭೈರಪ್ಪ ಮತ್ತು ಕೆ ಶಿವನ್ 
ರಾಜ್ಯ

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್

ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ಕಲಬುರಗಿ:  ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

ಅಸಾಮಾನ್ಯ ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಲು ಸಲ್ಲಿಸಿದ ಪ್ರಸ್ತಾವನೆಯನ್ನು ಭಾರತದ ಘನವೆತ್ತ ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಅನುಮೋದನಾ ಪತ್ರವು ಮಾರ್ಚ್ 18 ರಂದು ವಿಶ್ವವಿದ್ಯಾನಿಲಯ ತಲುಪಿದೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಚ್. ಎಂ. ಮಹೇಶ್ವರಯ್ಯಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ತನ್ನ ಕಾರ್ಯಕಾರಿ ಮಂಡಳಿ ಹಾಗೂ ಶೈಕ್ಷಣಿಕ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಿ ತನ್ನ  ಮುಂಬರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಲು ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ವಿಶ್ವವಿದ್ಯಾಲಯವು ಶಿಫಾರಸ್ಸು ಮಾಡಿದ ಹೆಸರುಗಳಲ್ಲಿ  ಸಾಧಕರಾದ ಡಾ.ಎಂ.ಜಿ.ಬಿರಾದಾರ, ಡಾ.ಎಸ್.ಎಲ್.ಭೈರಪ್ಪ, ಡಾ.ಚೆನ್ನವೀರಕಣವಿ, ಸಾಲುಮರದತಿಮ್ಮಕ್ಕ, ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅನುಮೋದನೆ ನೀಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT