ರಾಕೇಶ್ ಎಂಪಿ ಹಾಗೂ ವರಮಹಾಲಕ್ಷ್ಮಿ 
ರಾಜ್ಯ

ಕೊರೋನಾ ವೈರಸ್: ಮದುವೆ ಮುಂದೂಡಿ ಇತರರಿಗೆ ಮಾದರಿಯಾದ ತುಮಕೂರಿನ ಜೋಡಿ

ವಿದೇಶದಿಂದ ಬರುವ 'ಹೈ-ಪ್ರೊಫೈಲ್' ಜನ, ಮದುವೆ ಸಮಾರಂಭ ಹಾಗೂ ಹೆಚ್ಚು ಜನ ಸೇರುವ ಇತರೆ ಕಾರ್ಯಕ್ರಮಗಳಿಂದ ದೂರವಿರುವಂತೆ ಸರ್ಕಾರ ಸೂಚಿಸಿದರು ಅದನ್ನು ಉಲ್ಲಂಘಿಸಿ ಹಲವು ಕಾರ್ಯಕ್ರಮಗಳಲ್ಲಿ...

ತುಮಕೂರು: ವಿದೇಶದಿಂದ ಬರುವ 'ಹೈ-ಪ್ರೊಫೈಲ್' ಜನ, ಮದುವೆ ಸಮಾರಂಭ ಹಾಗೂ ಹೆಚ್ಚು ಜನ ಸೇರುವ ಇತರೆ ಕಾರ್ಯಕ್ರಮಗಳಿಂದ ದೂರವಿರುವಂತೆ ಸರ್ಕಾರ ಸೂಚಿಸಿದರು ಅದನ್ನು ಉಲ್ಲಂಘಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಕೊರೋನಾ ವೈರಸ್ ಹರಡುವದನ್ನು ತಡೆಯುವುದಕ್ಕಾಗಿ ತುಮಕೂರಿನ ಕ್ಯಾತಸಂದ್ರದ ಯುವ ಜೋಡಿಯೊಂದು ತಮ್ಮ ಮದುವೆ ಸಮಾರಂಭ ಮುಂದೂಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ಕೊರೋನಾ ವೈರಸ್ ಹರಡುವುದನ್ನು ತಡೆಯಲು ಮದುವೆ, ನಿಶ್ಚಿತಾರ್ಥ ಹಾಗೂ ಇತರೆ ಕಾರ್ಯಕ್ರಮಗಳನ್ನು ಮುಂದೂಡುವಂತೆ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಶನಿವಾರ ನಡೆಯಬೇಕಿದ್ದ ಕ್ಯಾತಸಂದ್ರದ ರಾಕೇಶ್ ಎಂಪಿ ಹಾಗೂ ವರಮಹಾಲಕ್ಷ್ಮಿ ಜೋಡಿಯ ಮದುವೆಯನ್ನು ರದ್ದು ಮಾಡಲಾಗಿದೆ. 

ಇಂದು ಸಂಜೆ ಆರತಕ್ಷತೆ ಹಾಗೂ ನಾಳೆ ಮುಹೂರ್ತ ನಿಗದಿಯಾಗಿತ್ತು. ಈಗಾಗಲೇ 1 ಸಾವಿರ ಜನರಿಗೆ ಮದುವೆ ಕಾರ್ಡ್ ಗಳನ್ನು ನೀಡಲಾಗಿದೆ. ಆದರೆ ತುಮಕೂರು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ಶುಕ್ರವಾರ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಮದುವೆ ಮುಂದೂಡಲು ನಿರ್ಧರಿಸಿದ್ದಾರೆ.

ಐದು ದಿನಗಳ ಹಿಂದೆಯೇ ನಾವು ಮದುವೆ ಮಂದೂಡುವ ನಿರ್ಧಾರ ತೆಗೆದುಕೊಂಡೆವು ಮತ್ತು ಈ ವಿಚಾರವನ್ನು ಎಲ್ಲಾ ಸಂಬಂಧಿಗಳಿಗೆ ಮತ್ತು ಸ್ನೇಹಿತರಿಗೆ ವಾಟ್ಸ್ ಆಪ್ ಮತ್ತು ಮೆಸೇಜ್ ಗಳ ಮೂಲಕ ತಿಳಿಸಿದ್ದೇವೆ. ನಮ್ಮ ಮತ್ತು ನಮ್ಮ ಆತ್ಮೀಯರ ಸುರಕ್ಷತೆಯ ದೃಷ್ಟಿಯಿಂದ ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ವರನ ಹಿರಿಯ ಸಹೋದರ ಶಿವಕುಮಾರ್ ಅವರು ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

ಮದುವೆ ರದ್ದಾಗಿದ್ದರಿಂದ ನಮಗೆ 10 ಸಾವಿರ ರೂ. ನಷ್ಟ ಆಗಬಹುದು. ಆದರೆ ಜನರ ಆರೋಗ್ಯ ಮುಖ್ಯ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT