ಸೌಮ್ಯರೆಡ್ಡಿ 
ರಾಜ್ಯ

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ: ಸೌಮ್ಯಾರೆಡ್ಡಿ 

ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರು: ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಾ.9 ರಂದು ನಡೆದ 14ನೇ ವನ್ಯಜೀವಿ ಮಂಡಳಿ ಸಭೆಯಲ್ಲಿ ಪರಿಸರವಾದಿಗಳು ಮತ್ತು ಮಂಡಳಿಯ ಕೆಲ ಸದಸ್ಯರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. 

ಪರಿಸರವಾದಿಗಳ ವಿರೋಧದ ಮಧ್ಯೆಯೂ ಯೋಜನೆ ಪರ ತೀರ್ಮಾನ ಕೈಗೊಳ್ಳಲಾಗಿದ್ದು, ಯೋಜನೆ ಬೆಂಬಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಹಲವಾರು ರಾಜಕೀಯ ಒತ್ತಡಗಳಿಂದ ಹಾಗೂ ಕಾಣದ ಕೈಗಳ ಕೈವಾಡದಿಂದ ಮತ್ತೆ ಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಮತ್ತೊಮ್ಮೆ ಸಭೆ ನಡೆಸಿದ್ದಾರೆ.

ಬೇರೆ ಮಾರ್ಗವಿದ್ದರೂ ಈ ಯೋಜನೆಯನ್ನು ಏಕೆ ಮಾಡಿದ್ದು ಹಾಗೂ ಸಭೆಯಲ್ಲಿ ಅರಣ್ಯ ಸಚಿವರೇ ಗೈರು ಹಾಜರಾಗಿದ್ದರು. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಈ ಯೋಜನೆ ಜಾರಿಗೆ ಬಂದರೆ ಮರಗಳ ಮಾರಣಹೋಮದಿಂದ ಮುಂದೆ ಪರಿಸರದ ಮೇಲಾಗುವ ದುಷ್ಪರಿಣಾಮಗಳಿಗೆ ಸರ್ಕಾರದ ಈ ನಿರ್ಧಾರವೇ ಕಾರಣವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!