ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ-ಅಂಕೋಲ ರೈಲ್ವೇ ಮಾರ್ಗಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಮಣಿದಿರುವ ರಾಜ್ಯ ಸರ್ಕಾರ, ವನ್ಯ ಜೀವಿ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಹುಬ್ಭಳ್ಳಿ-ಅಂಕೋಲ ರೈಲ್ವೇ ಯೋಜನೆಗೆ ಹಸಿರು ನಿಶಾನೆ ತೋರಿದೆ. 

ಬೆಂಗಳೂರು: ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಮಣಿದಿರುವ ರಾಜ್ಯ ಸರ್ಕಾರ, ವನ್ಯ ಜೀವಿ ಮಂಡಳಿ ಸದಸ್ಯರ ವಿರೋಧದ ನಡುವೆಯೂ ಹುಬ್ಭಳ್ಳಿ-ಅಂಕೋಲ ರೈಲ್ವೇ ಯೋಜನೆಗೆ ಹಸಿರು ನಿಶಾನೆ ತೋರಿದೆ. 

ಈ ನಿರ್ಧಾರದಿಂದಾಗಿ ರೈಲ್ವೆ ಮಾರ್ಗದ ಅನುಕೂಲ ಪಡೆಯುವವರಿಗೆ ಸಂತೋಷ ತಂದಿದ್ದರೆ, ಪರಿಸರ ಪ್ರಿಯರು ಪಶ್ಚಿಮ ಘಟ್ಟದ ದಟ್ಟ ಕಾನನದಲ್ಲಿ ಎರಡು ಲಕ್ಷ ಮರಗಳ ಹನನವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ 14ನೇ ವನ್ಯ ಜೀವಿ ಮಂಡಳಿ ಸಭೆಯಲ್ಲಿ ಯೋಜನೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆಗೆ ಮರಗಳನ್ನು ಕಡಿಯುವುದರಿಂದ ಪರಿಸರ ವೈಪರೀತ್ಯಗಳು ಉಂಟಾಗಲಿವೆ. ಈ ರೀತಿಯ ಬೆಳವಣಿಗೆಯಿಂದ ಕೊಡಗು ಮತ್ತು ಕೇರಳ ರಾಜ್ಯದಲ್ಲಿ ಪ್ರವಾಹ ಉಂಟಾಗಿತ್ತು. ಈ ಯೋಜನೆಗೆ 2 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಬೇಕಾಗುತ್ತದೆ. ಕೇಂದ್ರ ಸರ್ಕಾರವೂ ಈ ಯೋಜನೆ ಜಾರಿಗೊಳಿಸುವುದು ಸರಿಯಲ್ಲ ಎಂದು ಹೇಳಿದೆ. ಜೊತೆಗೆ ಕೇಂದ್ರೀಯ ಉನ್ನತಾಧಿಕಾರ ಸಮಿತಿ ಈ ಯೋಜನೆ ಜಾರಿಗೆ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಮಂಡಳಿ ಸದಸ್ಯರು ಹೇಳಿದ್ದಾರೆ. 

2 ದಶಕಗಳ ಹಿಂದೆ ಕೇಂದ್ರ ಸರ್ಕಾರ ರಾಜ್ಯದ ಉತ್ತರ ಮತ್ತು ಮಧ್ಯ ಭಾಗವನ್ನು ಕರಾವಳಿಗೆ ಸಂಪರ್ಕಿಸುವಂತಹ ಹುಬ್ಬಳ್ಳಿ-ಅಕೋಲ ರೈಲು ಮಾರ್ಗ ಯೋಜನೆಗೆ ಒಪ್ಪಿಗೆ ನೀಡಿತ್ತು. 164 ಕಿ ಮೀ ಉದ್ದದ ಈ ರೈಲು ಯೋಜನೆಗೆ 2000ರಲ್ಲಿ ಆಗಿನ ಪ್ರಧಾನಿಯಾಗಿದ್ದ ವಾಜಪೇಟಿ ಸಂಕು ಸ್ಥಾಪನೆ ನೆರವೇರಿಸಿದ್ದರು. ಈ ಯೋಜನೆಯಿಂದ ಉತ್ತರ ಕನ್ನಡ ಜಿಲ್ಲೆಯ ಇನ್ನಷ್ಟು ಕಾಡು ನಾಶವಾಗುತ್ತದೆ ಎಂದು ಶಿರಸಿಯ ಪರಿಸರ ಸಂರಕ್ಷಣಾ ಕೇಂದ್ರ ಮತ್ತು ಬೆಂಗಳೂರಿನ ಉತ್ತರ ಕನ್ನಡ ವೈಲ್ಡರ್ನೆಸ್ ಕ್ಲಬ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT