ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಬಗ್ಗೆ ಪ್ರಚೋದನಕಾರಿ ಸಂದೇಶ: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ದೂರು

ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಸಂದೇಶ ಹಾಕಿದ ವೈದ್ಯರೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಸಂದೇಶ ಹಾಕಿದ ವೈದ್ಯರೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

‘‘ಪ್ರೀತಿಯ ಕೊರೋನ, ಹೇಗಿದ್ದರೂ ಬಂದಿದ್ದೀಯ. ಮೋದಿ ವಿರೋಧಿಗಳನ್ನು ಬಂದು ಭೇಟಿ ಮಾಡಿ ಹೋಗು. ಇಲ್ಲದಿದ್ದರೆ ಅವರೆಲ್ಲರೂ ಸಾಕ್ಷ ಕೇಳುತ್ತಾರೆ’’ಎಂದು ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸುರೇಶ್ ಪುತ್ತೂರಾಯ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.

ಜಾಗತಿಕವಾಗಿ ಭೀತಿಯನ್ನುಂಟು ಮಾಡಿರುವ ಕೊರೋನ ವೈರಸ್ ಸೋಂಕು ಬಗ್ಗೆ ಡಾ.ಸುರೇಶ್ ಪುತ್ತೂರಾಯ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಬರೆದು ವೈದ್ಯಕೀಯ ಕ್ಷೇತ್ರಕ್ಕೆ ಅಪಚಾರ ಎಸಗಿದ್ದು, ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಪಿ.ಬಿ.ಕೆ.ಇಬ್ರಾಹೀಂ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಾಗತಿಕವಾಗಿ ಭೀತಿಯನ್ನುಂಟು ಮಾಡಿರುವ ಕೊರೋನ ವೈರಸ್ ಸೋಂಕು ಬಗ್ಗೆ ಡಾ.ಸುರೇಶ್ ಪುತ್ತೂರಾಯ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಬರೆದು ವೈದ್ಯಕೀಯ ಕ್ಷೇತ್ರಕ್ಕೆ ಅಪಚಾರ ಎಸಗಿದ್ದು, ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇಬ್ರಾಹೀಂ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.

‘‘ಪ್ರೀತಿಯ ಕೊರೋನ, ಹೇಗಿದ್ದರೂ ಬಂದಿದ್ದೀಯ. ಮೋದಿ ವಿರೋಧಿಗಳನ್ನು ಬಂದು ಭೇಟಿ ಮಾಡಿ ಹೋಗು. ಇಲ್ಲದಿದ್ದರೆ ಅವರೆಲ್ಲರೂ ಸಾಕ್ಷ ಕೇಳುತ್ತಾರೆ’’ ಎಂಬ ಸಂದೇಶ ಡಾ.ಸುರೇಶ್ ಪುತ್ತೂರಾಯ ಅವರ ಸಂದೇಶ ಫಾರ್ವರ್ಡ್ ಆಗಿ ತನಗೆ ಬಂದಿದೆ. ಈ ರೀತಿಯ ಸಂದೇಶವು ಪ್ರಚೋದನಕಾರಿಯಾಗಿದೆ.

ಈ ಸಂದೇಶ ಹರಡಿದ ಆರೋಪಿ ಪುತ್ತೂರಿನಲ್ಲಿ ವೈದ್ಯರಾಗಿ ಸಾಮಾಜಿಕ, ರಾಜಕೀಯ ಪ್ರಬಲರಾಗಿದ್ದಾರೆ. ಇವರ ಈ ಸಂದೇಶವನ್ನು ಓದಿ ಅದರಿಂದ ಪ್ರಚೋದನೆಗೊಂಡು ಕೋಮುಗಲಭೆ ಉಂಟಾಗುವ ಸಾಧ್ಯತೆಗಳಿದ್ದು ಜವಾಬ್ದಾರಿಯುತ ಸ್ಥಾನದಲ್ಲಿರುವ ಆರೋಪಿಯು ಕೋಮು ಪ್ರಚೋದನೆಯ ಸಂದೇಶವನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದಾರೆ. ಆದ್ದರಿಂದ ಆರೋಪಿಯ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ವಿನಂತಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT