ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಬಗ್ಗೆ ಪ್ರಚೋದನಕಾರಿ ಸಂದೇಶ: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ದೂರು

ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಸಂದೇಶ ಹಾಕಿದ ವೈದ್ಯರೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಸಂದೇಶ ಹಾಕಿದ ವೈದ್ಯರೊಬ್ಬರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

‘‘ಪ್ರೀತಿಯ ಕೊರೋನ, ಹೇಗಿದ್ದರೂ ಬಂದಿದ್ದೀಯ. ಮೋದಿ ವಿರೋಧಿಗಳನ್ನು ಬಂದು ಭೇಟಿ ಮಾಡಿ ಹೋಗು. ಇಲ್ಲದಿದ್ದರೆ ಅವರೆಲ್ಲರೂ ಸಾಕ್ಷ ಕೇಳುತ್ತಾರೆ’’ಎಂದು ಪುತ್ತೂರಿನ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸುರೇಶ್ ಪುತ್ತೂರಾಯ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು.

ಜಾಗತಿಕವಾಗಿ ಭೀತಿಯನ್ನುಂಟು ಮಾಡಿರುವ ಕೊರೋನ ವೈರಸ್ ಸೋಂಕು ಬಗ್ಗೆ ಡಾ.ಸುರೇಶ್ ಪುತ್ತೂರಾಯ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಬರೆದು ವೈದ್ಯಕೀಯ ಕ್ಷೇತ್ರಕ್ಕೆ ಅಪಚಾರ ಎಸಗಿದ್ದು, ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನರಿಮೊಗರು ಗ್ರಾಮದ ಪುರುಷರಕಟ್ಟೆ ನಿವಾಸಿ ಪಿ.ಬಿ.ಕೆ.ಇಬ್ರಾಹೀಂ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಾಗತಿಕವಾಗಿ ಭೀತಿಯನ್ನುಂಟು ಮಾಡಿರುವ ಕೊರೋನ ವೈರಸ್ ಸೋಂಕು ಬಗ್ಗೆ ಡಾ.ಸುರೇಶ್ ಪುತ್ತೂರಾಯ ಸಾಮಾಜಿಕ ಜಾಲತಾಣದಲ್ಲಿ ವಿಕೃತವಾಗಿ ಬರೆದು ವೈದ್ಯಕೀಯ ಕ್ಷೇತ್ರಕ್ಕೆ ಅಪಚಾರ ಎಸಗಿದ್ದು, ಅವರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇಬ್ರಾಹೀಂ ಪೊಲೀಸ್ ದೂರಿನಲ್ಲಿ ಆಗ್ರಹಿಸಿದ್ದಾರೆ.

‘‘ಪ್ರೀತಿಯ ಕೊರೋನ, ಹೇಗಿದ್ದರೂ ಬಂದಿದ್ದೀಯ. ಮೋದಿ ವಿರೋಧಿಗಳನ್ನು ಬಂದು ಭೇಟಿ ಮಾಡಿ ಹೋಗು. ಇಲ್ಲದಿದ್ದರೆ ಅವರೆಲ್ಲರೂ ಸಾಕ್ಷ ಕೇಳುತ್ತಾರೆ’’ ಎಂಬ ಸಂದೇಶ ಡಾ.ಸುರೇಶ್ ಪುತ್ತೂರಾಯ ಅವರ ಸಂದೇಶ ಫಾರ್ವರ್ಡ್ ಆಗಿ ತನಗೆ ಬಂದಿದೆ. ಈ ರೀತಿಯ ಸಂದೇಶವು ಪ್ರಚೋದನಕಾರಿಯಾಗಿದೆ.

ಈ ಸಂದೇಶ ಹರಡಿದ ಆರೋಪಿ ಪುತ್ತೂರಿನಲ್ಲಿ ವೈದ್ಯರಾಗಿ ಸಾಮಾಜಿಕ, ರಾಜಕೀಯ ಪ್ರಬಲರಾಗಿದ್ದಾರೆ. ಇವರ ಈ ಸಂದೇಶವನ್ನು ಓದಿ ಅದರಿಂದ ಪ್ರಚೋದನೆಗೊಂಡು ಕೋಮುಗಲಭೆ ಉಂಟಾಗುವ ಸಾಧ್ಯತೆಗಳಿದ್ದು ಜವಾಬ್ದಾರಿಯುತ ಸ್ಥಾನದಲ್ಲಿರುವ ಆರೋಪಿಯು ಕೋಮು ಪ್ರಚೋದನೆಯ ಸಂದೇಶವನ್ನು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದಾರೆ. ಆದ್ದರಿಂದ ಆರೋಪಿಯ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ವಿನಂತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT