ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾವೈರಸ್: ಮಾರ್ಚ್ 31ರವರೆಗೂ ಎಲ್ಲಾ ಶಿಕ್ಷಕರು ಮನೆಯಿಂದಲೇ ಕೆಲಸ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರನೇ ತರಗತಿವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲಾಗಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಒಂದರಿಂದ ಆರರವರೆಗಿನ ತರಗತಿಗಳು ರದ್ದುಗೊಂಡ ಬೆನ್ನಲ್ಲೇ , ಏಳು ಮತ್ತು 10ನೇ ತರಗತಿಯನ್ನು ಮುಂದೂಡಲ್ಪಟ್ಟಿರುವ ಸರ್ಕಾರ ಇದೀಗ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಎಲ್ಲಾ ಶಿಕ್ಷಕರು ಮಾರ್ಚ್ 31ರವರೆಗೂ ಮನೆಯಿಂದಲೇ ಕೆಲಸ ಮಾಡುವಂತೆ ನಿರ್ದೇಶಿಸಿದೆ.

ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ, ಗುತ್ತಿಗೆ ಶಿಕ್ಷಕರು ಸೇರಿದಂತೆ ಸರ್ಕಾರಿ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲಾರಿಗೂ  ಈ ಅವಧಿಯನ್ನು ಕರ್ತವ್ಯದ ದಿನವೆಂದು ಪರಿಗಣಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಉಪ ಆಯುಕ್ತರು, ಬಿಇಓ ಹಾಗೂ ಮುಖ್ಯ ಶಿಕ್ಷಕರಿಗೆ ಈ ಸುತ್ತೋಲೆಯನ್ನು ಕಳುಹಿಸಲಾಗಿದೆ,

ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಪಿಯು ಕಾಲೇಜುಗಳ ಎಲ್ಲಾ ಬೋಧಕರು, ಬೋಧಕೇತರ ಸಿಬ್ಬಂದಿಗಳಿಗೂ ಮನೆಯಿಂದಲೇ ಕೆಲಸಕ್ಕೆ ಅವಕಾಶವಿರಲಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿದ್ದು, ನೂತನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT