ಜನತಾ ಕರ್ಫ್ಯೂ 
ರಾಜ್ಯ

ಯಶಸ್ವಿಗೊಂಡ ಜನತಾ ಕರ್ಫೂ: ಕೃಷಿ ಕಾರ್ಯದಿಂದ ದೂರ ಉಳಿದು ಬೆಂಬಲ ವ್ಯಕ್ತಪಡಿಸಿದ ರೈತರು

ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಮೈಸೂರು ಜಿಲ್ಲೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸದಾ ಜನದಟ್ಟಣೆಯಿಂದ ಕೂಡಿದ್ದ ಮೈಸೂರು ನಗರದಲ್ಲಿ ಭಾನುವಾರ ನೀರವ ಮೌನ ಆವರಿಸಿತ್ತು. ಪ್ರತೀನಿತ್ಯ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದ ರೈತರೂ ತಮ್ಮ ಕಾರ್ಯಗಳನ್ನು ಸ್ಥಗಿತಗೊಳಿಸಿ,

ಮೈಸೂರು: ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಮೈಸೂರು ಜಿಲ್ಲೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸದಾ ಜನದಟ್ಟಣೆಯಿಂದ ಕೂಡಿದ್ದ ಮೈಸೂರು ನಗರದಲ್ಲಿ ಭಾನುವಾರ ನೀರವ ಮೌನ ಆವರಿಸಿತ್ತು. ಪ್ರತೀನಿತ್ಯ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದ ರೈತರೂ ತಮ್ಮ ಕಾರ್ಯಗಳನ್ನು ಸ್ಥಗಿತಗೊಳಿಸಿ, ಕರ್ಫ್ಯೂಗೆ ಬೆಂಬಲ ವ್ಯಕ್ತಪಡಿಸಿದ್ದರು. 

ಕೃಷಿ ಕಾರ್ಯದಿಂದ ದೂರ ಉಳಿದಿದ್ದ ರೈತರು ದಿನಪತ್ರಿಕೆ ಓದುವುದು, ಟಿವಿ ನೋಡುವ ಕಾರ್ಯದಲ್ಲಿ ನಿರತರಾಗಿದ್ದರು. ಗಡಿಗಳು ಬಂದ್ ಆಗಿದ್ದ ಕಾರಣ ಬೆಂಗಳೂರು-ಮೈಸೂರು ರಸ್ತೆ, ಬಸ್ ನಿಲ್ದಾಣಗಳು, ರೈಲ್ವೇ ನಿಲ್ದಾಣಗಳು, ಮೈಸೂರು-ಊಟಿ, ಕೋಲ್ಕತಾ ಮತ್ತು ಕೊಯಿಮತ್ತೂರು ರಸ್ತೆಗಳು ಬಿಕೋ ಎನ್ನುತ್ತಿದ್ದವು. ಈ ನಡುವೆ ಮಂಡ್ಯ ಜಿಲ್ಲಾ ಆಡಳಿತ ಮಂಡಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಎಲ್ಲಾ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಮಾರ್ಚ್.27 ವರೆಗೂ ಬಂದ್ ಮಾಡುವಂತೆ ಆದೇಶ ನೀಡಿದ್ದಾರೆ. 

ಅಲ್ಲದೆ, ಮೈಸೂರು ವ್ಯಕ್ತಿಯಲ್ಲಿ ವೈರಸ್ ಕಾಣಿಸಿಕೊಂಡಿದ್ದು, ಈ ವ್ಯಕ್ತಿ ಟ್ಯಾಕ್ಸಿಯೊಂದರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಸಂಚಾರ ಮಾಡಿದ್ದಾನೆ. ಸಂಚಾರದ ಮಧ್ಯೆ ಹೆದ್ದಾರಿಯ ಟೀ ಅಂಗಡಿಯಲ್ಲಿ ಟೀ ಕುಡಿದಿದ್ದು, ಇದೀಗ ಟೀ ಅಂಗಡಿಯ ಮಾಲೀಕ ಹಾಗೂ ಸಿಬ್ಬಂದಿಗಳನ್ನೂ 12 ದಿನಗಳ ಕಾಲ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಇನ್ನು ಜನತಾ ಕರ್ಫ್ಯೂ ನಡುವಲ್ಲೂ ಸೂರ್ಯ ಮೂಡುವುದರೊಳಗೆ ಜೋಡಿಗಳು ಸಪ್ತಪದಿ ತುಳಿದಿರುವ ಘಟನೆ ಭಾನುವಾರ ನಡೆಯಿತು. 

ಮೈಸೂರಿನ ಪಡುವಾರಹಳ್ಳಿ ವರಸಿದ್ದಿ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರವೀಣ್-ಅಕ್ಷತಾ ಮದುವೆ ನೆರವೇರಿತು. ಇಬ್ಬರು ಒಂಟಿಕೊಪ್ಪಲಿನ ನಿವಾಸಿಗಳಾಗಿದ್ದರಿಂದ ಕಡಿಮೆ ಸಂಖ್ಯೆಯಲ್ಲಿ ಬಂಧುಬಳಗದವರು ಸೇರಿ ವಿವಾಹಕ್ಕೆ ಶುಭ ಹಾರೈಸಿದರು. ಬೇರೆಯವರಿಗೆ ತೊಂದರೆ ಕೊಡಬಾರದು ಎಂಬ ಕಾರಣಕ್ಕೆ ಸರಳವಾಗಿ ಮದುವೆಗೆ ಉಭಯ ಕುಟುಂಬಗಳು ಒಪ್ಪಿದ್ದವು. ಹಾಗಾಗಿ 7 ಗಂಟೆಯೊಳಗೆ ಮಾಂಗಲ್ಯಧಾರಣೆ ಮುಗಿಸಿದ ನವಜೋಡಿ ಗುರು ಹಿರಿಯ ಆಶೀರ್ವಾದ ಪಡೆದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT