ಕಾಂಗ್ರೆಸ್, ಜೆಡಿಎಸ್ ಬಿಜೆಪಿ ಲೋಗೋ 
ರಾಜ್ಯ

ರಾಜಕೀಯ ಸದ್ಯಕ್ಕೆ ಬೇಡ,  ಪಕ್ಷದ ಕಚೇರಿಯಿಂದ ದೂರಉಳಿಯುವಂತೆ ಕಾರ್ಯಕರ್ತರಿಗೆ ಕರೆ

ಕೊರೋನಾ ವೈರಸ್ ಭಯದಿಂದಾಗಿ ಎಲ್ಲಾ ರಾಜಕೀಯ ಪಕ್ಷಗಳ ಬಾಗಿಲು ಮುಚ್ಚಿವೆ, ಮಾರ್ಚ್ 31 ರ ವರೆಗೆ  ಯಾವುದೇ ಕಾರ್ಯಕರ್ತರೂ ಪಕ್ಷದ ಕಚೇರಿಗೆ ಬರದಂತೆ ನಾಯಕರು ಮನವಿ ಮಾಡಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ಭಯದಿಂದಾಗಿ ಎಲ್ಲಾ ರಾಜಕೀಯ ಪಕ್ಷಗಳ ಬಾಗಿಲು ಮುಚ್ಚಿವೆ, ಮಾರ್ಚ್ 31 ರ ವರೆಗೆ  ಯಾವುದೇ ಕಾರ್ಯಕರ್ತರೂ ಪಕ್ಷದ ಕಚೇರಿಗೆ ಬರದಂತೆ ನಾಯಕರು ಮನವಿ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಒಬ್ಬ ಸಿಬ್ಬಂದಿಮೂರು ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾರೆ.  ಮತ್ತೊಬ್ಬರು ಮತ್ತೊಂದು ಶಿಫ್ಟ್ ನಲ್ಲಿ ಕೆಲಸ ಮಾಡುತ್ತಾರೆ. ಮಲ್ಲೇಶ್ವರನಲ್ಲಿರುವ ಜಗನ್ನಾಥ ಭವನದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ,  ನೋಡಿಕೊಳ್ಳುತ್ತಿದ್ದಾರೆ.

ಯಾವುದೇ ಮಹತ್ವದ ಸಭೆಗಳನ್ನು ನಡೆಸುತ್ತಿಲ್ಲ, ತೀರಾ ತುರ್ತಿದ್ದರೇ ಮಾತ್ರ ಸಭೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.  ಸದ್ಯಕ್ಕೆ ಯಾವುದೇ ಸಚಿವರು ಪಕ್ಷದ ಕಚೇರಿಗೆ ಹಾಜರಾಗದಂತೆ ಸೂಚಿಸಲಾಗಿದೆ.

ಬಿಜೆಪಿಯಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಚೇರಿಗಳಲ್ಲಿಯೂ ಕಾರ್ಯಕರ್ತರು ಸೇರದಂತೆ ಸೂಚನೆ ನೀಡಲಾಗಿದೆ, ತಮ್ಮ ಕಚೇರಿಗೆ ಸದ್ಯ ಹೆಚ್ಚಿನ ಕಾರ್ಯಕರ್ತರು ಬರುತ್ತಿಲ್ಲ ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT