ಸಂಗ್ರಹ ಚಿತ್ರ 
ರಾಜ್ಯ

ಯುಗಾದಿ: ಮರಣ ತಂದ ಬೇವು 

ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.

ಬೆಂಗಳೂರು: ಹೊಸ ವರ್ಷ ಯುಗಾದಿ ಹಬ್ಬಕ್ಕಾಗಿ ಬೇವಿನ ಸೊಪ್ಪು ಕೀಳಲು ಹೋಗಿದ್ದ ವ್ಯಕ್ತಿಯೊರ್ವ ಮರದಿಂದ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಕಹಿಘಟನೆ ಕೆಪಿ ನಗರದ ಅಗ್ರಹಾರ ಬಳಿ ಸಂಭವಿಸಿದೆ.

35 ವರ್ಷದ ಕೆ.ಪಿ.ಅಗ್ರಹಾರದ ಕುಬೇರ ಮೃತಪಟ್ಟ ದುರ್ದೈವಿ. ಯುಗಾದಿ ಹಬ್ಬದ ದಿನ ಹಿರಿಯರಿಗೆ ಬೇವು-ಬೆಲ್ಲ ನೈವೇದ್ಯ ಮಾಡಬೇಕಿತ್ತು. ಕೊರೊನಾ ಸೋಂಕು ತಡೆಗಟ್ಟಲು ಭಾರತ್ ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳು ಬಂದ್ ಆಗಿದ್ದು, ಎಲ್ಲಿಯೂ ಬೇವು ಸಿಕ್ಕಿರಲಿಲ್ಲ.

ಹೀಗಾಗಿ ಕುಬೇರ್ ಮರವೊಂದನ್ನು ಏರಿ ಬೇವು ಕೀಳಲು ಮುಂದಾಗಿದ್ದರು. ಅದೇ ವೇಳೆಯೇ ಕಾಲು ಜಾರಿ ಬಿದ್ದಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟದ್ದಾರೆ.

ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕೆ.ಪಿ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಬೇರ ಅವರ ಪತ್ನಿ ಹಾಗೂ ಇಬ್ಬರೂ ಮಕ್ಕಳಿದ್ದು, ಇವರ ಆಕ್ರಂಧನ ಮುಗಿಲು ಮುಟ್ಟಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT