ರಾಜ್ಯ

ಆತಂಕ ಬೇಡ: ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ಓಪನ್ - ಡಿಜಿಪಿ

Vishwanath S

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಆದರೆ ಜನತೆ ಗುಂಪು ಸೇರದೆ ತಮಗೆ ಬೇಕಾದ ದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ದಿನದ 24 ಗಂಟೆ ದಿನಸಿ ಅಂಗಡಿ ತೆರೆಲು ಅವಕಾಶ ನೀಡಲಾಗಿದೆ. ಜನಜಂಗುಳಿ ತಪ್ಪಿಸಲು 24 ಗಂಟೆಯೂ ಓಪನ್ ಮಾಡಲು ಅನುಮತಿ ನೀಡಲಾಗಿದೆ.

ದಿನಸಿ, ಸೂಪರ್ ಮಾರ್ಕೆಟ್ ಗೆ ಅನುಮತಿ ನೀಡಲಾಗಿದೆ. ಗುಂಪು ಸೇರದಂತೆ ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೇ ವೈದ್ಯಕೀಯ ನೆರೆವಿಗಾಗಿ ಯಾವುದೇ ಪಾಸ್ ಅಗತ್ಯ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

SCROLL FOR NEXT