ಸೂಪರ್ ಮಾರ್ಕೆಟ್ 
ರಾಜ್ಯ

ಆತಂಕ ಬೇಡ: ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ಓಪನ್ - ಡಿಜಿಪಿ

ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ದಿನ ಬಳಕೆಯ ಅಗತ್ಯ ವಸ್ತುಗಳಿಗೆ ಜನರು ಮುಗಿ ಬೀಳುತ್ತಿರುವುದನ್ನು ತಪ್ಪಿಸಲು ದಿನದ 24 ಗಂಟೆ ದಿನಸಿ ಅಂಗಡಿ, ಸೂಪರ್ ಮಾರ್ಕೆಟ್ ತೆರೆಯಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಮತಿ ನೀಡಿದ್ದಾರೆ.

ಆದರೆ ಜನತೆ ಗುಂಪು ಸೇರದೆ ತಮಗೆ ಬೇಕಾದ ದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ದಿನದ 24 ಗಂಟೆ ದಿನಸಿ ಅಂಗಡಿ ತೆರೆಲು ಅವಕಾಶ ನೀಡಲಾಗಿದೆ. ಜನಜಂಗುಳಿ ತಪ್ಪಿಸಲು 24 ಗಂಟೆಯೂ ಓಪನ್ ಮಾಡಲು ಅನುಮತಿ ನೀಡಲಾಗಿದೆ.

ದಿನಸಿ, ಸೂಪರ್ ಮಾರ್ಕೆಟ್ ಗೆ ಅನುಮತಿ ನೀಡಲಾಗಿದೆ. ಗುಂಪು ಸೇರದಂತೆ ಪೊಲೀಸರು ಮನವಿ ಮಾಡಿದ್ದಾರೆ. ಅಲ್ಲದೇ ವೈದ್ಯಕೀಯ ನೆರೆವಿಗಾಗಿ ಯಾವುದೇ ಪಾಸ್ ಅಗತ್ಯ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT